ಬ್ರೇಕಿಂಗ್ ನ್ಯೂಸ್
11-04-22 02:48 pm Udupi Correspondent ಕರಾವಳಿ
ಉಡುಪಿ, ಎ.11 : ಸಿಎಂ ಬೊಮ್ಮಾಯಿ ಮೌನಿ, ನಾಲಿಗೆ ಕಳೆದುಕೊಂಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಕಾಲದಲ್ಲಿ ಹತ್ತು ಹಲವು ಕೊಲೆಗಳಾಗಿದ್ದವು. ಸರಣಿಯಾಗಿ ಹಿಂದು ಕಾರ್ಯಕರ್ತರನ್ನು ಕೊಲೆ ಮಾಡಲಾಗಿತ್ತು. ಆದರೆ ಕೊಲೆ ಮಾಡಿದವರ ಕೇಸನ್ನೇ ಅವರು ಹಿಂದೆ ತೆಗೆದುಕೊಂಡಿದ್ದಾರೆ. ಆಗ ಸಿದ್ದರಾಮಯ್ಯ ಬುದ್ಧಿ ಕಳೆದುಕೊಂಡಿದ್ದರಾ? ಎಂದು ಸಿಎಂ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.
ಕಾರ್ಯಕ್ರಮ ನಿಮಿತ್ತ ಉಡುಪಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಬಂದಿಳಿದ ವೇಳೆ ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರಸಕ್ತ ವಿದ್ಯಮಾನಗಳ ಬಗ್ಗೆ ಯಾರು ಏನೇ ವಿಶ್ಲೇಷಣೆ ಮಾಡಲಿ. ನಾವು ಸಂವಿಧಾನ ಬದ್ಧವಾಗಿ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡುತ್ತೇವೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಈ ದೃಷ್ಟಿಕೋನ ಇಟ್ಟುಕೊಂಡು ನಾವು ಕೆಲಸ ಮಾಡುತ್ತಿದ್ದೇವೆ. ಅವರವರ ವಿಚಾರಗಳನ್ನು ಪ್ರಚಾರ ಮಾಡುವುದಕ್ಕೆ ಏನೂ ತೊಂದರೆ ಇಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಯಾರೇ ಆಗಲಿ, ಹಿಂಸೆಗೆ ಇಳಿದರೆ ಸರಕಾರ ಸಹಿಸುವುದಿಲ್ಲ. ಈ ಸಂದೇಶವನ್ನು ಈಗಾಗಲೇ ಕಳುಹಿಸಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ನಾವು ಮಾತನಾಡುವುದಿಲ್ಲ. ನಮ್ಮ ಆಕ್ಷನ್ ಮಾತನಾಡುತ್ತದೆ. ನಾವು ಮಾತನಾಡಬಾರದು. ನಮ್ಮ ಕೆಲಸ ಮಾತನಾಡಬೇಕು. ನಮಗೆ ವಿಪಕ್ಷಗಳಿಂದ ಕಲಿಯಬೇಕಾದ್ದು ಏನೂ ಇಲ್ಲ. ಯಾವ ಸಂದರ್ಭದಲ್ಲಿ ಯಾವ ಕ್ರಮ ಕೈಗೊಳ್ಳಬೇಕೆಂದು ನಮಗೆ ಗೊತ್ತಿದೆ. ಇವರ ಕಾಲದಲ್ಲಿ ಎಷ್ಟು ಕೊಲೆ ಪ್ರಕರಣಗಳನ್ನು, ಎಷ್ಟು ಸಂಸ್ಥೆಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗಿತ್ತು ಅನ್ನೋದು ಗೊತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಮಂಗಳೂರಿನಲ್ಲಿ ಲವ್ ಜಿಹಾದ್ ವಿರುದ್ಧ ಹಿಂದು ಸಂಘಟನೆಗಳಿಂದ ಟಾಸ್ಕ್ ಫೋರ್ಸ್ ರಚನೆ ಬಗ್ಗೆ ಕೇಳಿದ ಪ್ರಶ್ನೆಗೆ, ತಮ್ಮ ರಕ್ಷಣೆ ಮಾಡಿಕೊಳ್ಳಲು ಎಲ್ಲರೂ ಸ್ವತಂತ್ರರಿದ್ದಾರೆ. ಇದರ ಬಗ್ಗೆ ತಪ್ಪು ವಿಶ್ಲೇಷಣೆ ಸರಿಯಲ್ಲ. ಸರಕಾರ ಕಾನೂನು ಬದ್ಧವಾಗಿ ಕೆಲಸ ಮಾಡುತ್ತಿದೆ. ಕೆಲವೊಂದು ಕಾನೂನುಗಳನ್ನು ಹಿಂದಿನ ಸರಕಾರವೇ ಮಾಡಿದ್ದು ನಾವೇನು ಹೊಸ ಕಾನೂನುಗಳನ್ನು ಮಾಡಿಲ್ಲ. ಅವುಗಳನ್ನು ಸರಿಯಾದ ರೀತಿಯಲ್ಲಿ ಜಾರಿ ಮಾಡುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
CM Bommai slams Siddaramaiah in Udupi, I am man of action not words. Siddaramaiah was a man of just words but nothing came to action he slammed.
24-10-25 01:11 pm
Bangalore Correspondent
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
24-10-25 11:57 am
Mangalore Correspondent
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
24-10-25 10:07 am
Mangalore Correspondent
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm