ಬ್ರೇಕಿಂಗ್ ನ್ಯೂಸ್
11-04-22 09:19 pm Mangalore Correspondent ಕರಾವಳಿ
ಮಂಗಳೂರು, ಎ.11: ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತ, ಬಲಿಪ ಪರಂಪರೆಯ ಭಾಗವತರೆಂದೇ ಖ್ಯಾತಿ ಪಡೆದಿದ್ದ ಬಲಿಪ ಪ್ರಸಾದ ಭಾಗವತ (46) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ತಂದೆ ಯಕ್ಷಗಾನ ಕ್ಷೇತ್ರದ ದಿಗ್ಗಜ ಬಲಿಪ ನಾರಾಯಣ ಭಾಗವತರಿಂದಲೇ ಭಾಗವತಿಕೆ ಕಲಿತು ತನ್ನ 17ನೇ ವಯಸ್ಸಿನಲ್ಲೇ ಯಕ್ಷಗಾನ ಮೇಳದಲ್ಲಿ ಭಾಗವತಿಕೆ ಮಾಡಿದ್ದ ಪ್ರಸಾದ ಭಾಗವತರು, ತಂದೆಯ ಸಿರಿಕಂಠದ ರೀತಿಯಲ್ಲೇ ಪದ್ಯ ಹಾಡುವುದನ್ನು ರೂಢಿಸಿಕೊಂಡಿದ್ದರು.
ಹಿಂದಿನ ಕಾಲದಲ್ಲಿ ಬಲಿಪರ ಭಾಗವತಿಕೆ ಕೇಳಿದ್ದವರು ಮಗನ ಭಾಗವತಿಕೆಯಲ್ಲಿ ವ್ಯತ್ಯಾಸ ಕಾಣದಂತೆ ಸಿರಿಕಂಠ ಇತ್ತು. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಕಟೀಲು ದುರ್ಗಾಪರಮೇಶ್ವರಿ ದೇಗುಲದ ಎರಡನೇ ಮೇಳದಲ್ಲಿ ಮುಖ್ಯ ಭಾಗವತರ ಪಟ್ಟ ಪಡೆದುಕೊಂಡಿದ್ದರು. ಗಂಟಲು ಕ್ಯಾನ್ಸರ್ ಕಾಯಿಲೆಯಿಂದಾಗಿ ಈ ಬಾರಿ ಮೇಳದ ತಿರುಗಾಟಕ್ಕೆ ಹೋಗಿರಲಿಲ್ಲ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಮೂಡುಬಿದಿರೆಯಲ್ಲಿ ನೆಲೆಸಿದ್ದ ಪ್ರಸಾದ ಭಾಗವತರು ಮೂರು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Mangalore Bhagavatha Balipa Prasad Bhat passed away on Monday, April 11. He was the main Bhagavatha of Kateel mela.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm