ಬ್ರೇಕಿಂಗ್ ನ್ಯೂಸ್
11-04-22 10:28 pm Mangalore Correspondent ಕರಾವಳಿ
ಮಂಗಳೂರು, ಎ.11: ಸ್ನೇಹಿತರಿಂದ ಸಾಲ ಮಾಡಿ ಹಿಂತಿರುಗಿಸಲಾಗದ ಬೇಸರದಲ್ಲಿ ಯುವಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಕಾಟಿಪಳ್ಳ ನಿವಾಸಿ ಕ್ಯಾಂಡ್ರಿಕ್ ಲಾರೆನ್ಸ್ ಡಿಸೋಜ(24) ಮೃತ ವ್ಯಕ್ತಿ. ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಸೋಮವಾರ ಬೆಳಗ್ಗೆ 11 ಗಂಟೆಗೆ ಮನೆ ಬಿಟ್ಟು ಹೋಗಿದ್ದ. ಪತ್ರವನ್ನು ನೋಡಿದ ತಾಯಿ ಬಳಿಕ ಹುಡುಕಾಟಕ್ಕೆ ತೊಡಗಿದ್ದರು. ಸುರತ್ಕಲ್ ಪೊಲೀಸರಿಗೂ ಮಾಹಿತಿ ನೀಡಿದ್ದರು. ಇದೇ ವೇಳೆ, ಮಧ್ಯಾಹ್ನ 3 ಗಂಟೆ ವೇಳೆಗೆ ಸುರತ್ಕಲ್ ಬಳಿಯ ಮಲ್ಲಮಾರು ಬೀಚ್ ನಲ್ಲಿ ಕ್ಯಾಂಡ್ರಿಕ್ ಲಾರೆನ್ಸ್ ಶವ ಪತ್ತೆಯಾಗಿದೆ.
ಡೆತ್ ನೋಟ್ ನಲ್ಲಿ ಕೆಲವರ ಹೆಸರು ಬರೆದಿದ್ದು ಅವರಿಗೆ ಆಗಬೇಕಾದ ಸಣ್ಣ ಪುಟ್ಟ ಹಣದ ಅವಶ್ಯಕತೆಗಳನ್ನು ಬರೆದಿದ್ದಾನೆ. ಅಲ್ಲದೆ, ಈ ಹಣವನ್ನು ಹಿಂತಿರುಗಿಸುವುದಕ್ಕಾಗಿ ತಾಯಿಯ ಬಂಗಾರವನ್ನು ಕೊಂಡೊಯ್ದಿದ್ದು 12 ಸಾವಿರ ರೂ.ಗೆ ಅಡವಿಟ್ಟಿದ್ದ. ಆದರೆ ಹಣವನ್ನು ಆಗಬೇಕಾದವರಿಗೆ ಹಿಂತಿರುಗಿಸಲಾಗದೆ ಕೈಯಲ್ಲಿ ಖರ್ಚಾಗಿ ಖಾಲಿಯಾಗಿತ್ತು ಎಂದು ಬರೆದಿದ್ದಾನೆ. ಜೊತೆಗೆ ಕುಡಿತದ ಚಟ ಹೊಂದಿದ್ದರಿಂದ ಅದಕ್ಕೇ ಹಣ ಖಾಲಿಯಾಗಿತ್ತು ಎನ್ನಲಾಗಿದೆ.
ಅಲ್ಲದೆ, ತನ್ನ ಮೊಬೈಲ್ ವಿವರಗಳನ್ನೂ ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ಗೂಗಲ್ ಪೇ, ಎಟಿಎಂ ಇತ್ಯಾದಿ ಪಾಸ್ ವರ್ಡ್ ಗಳನ್ನು ಬರೆದಿದ್ದಲ್ಲದೆ, ಮೇಲಿನ ಕಾರಣವಲ್ಲದೆ ಸಾವಿಗೆ ಪ್ರಮುಖ ಕಾರಣವೊಂದು ಮೊಬೈಲಿನಲ್ಲಿದೆ. ಸಾರಿ ಅಮ್ಮಾ ಎನ್ನುತ್ತಾ ಪತ್ರವನ್ನು ಬರೆದು ಮುಗಿಸಿದ್ದಾನೆ. ತುಳು ಭಾಷೆಯಲ್ಲಿ ಇಂಗ್ಲಿಷ್ ವರ್ಣಮಾಲೆಯಲ್ಲಿ ಪತ್ರವನ್ನು ಬರೆಯಲಾಗಿದೆ. ಸಾಮಾನ್ಯ ಕುಟುಂಬದ ಲಾರೆನ್ಸ್ ಸಣ್ಣ ವಯಸ್ಸಿನಲ್ಲಿಯೇ ಖಾಸಗಿಯಾಗಿ ಕೆಲಸಕ್ಕೆ ಸೇರಿದ್ದು ಕುಡಿಯುವುದನ್ನೂ ರೂಢಿಸಿಕೊಂಡಿದ್ದ. ಇದೀಗ ಸಣ್ಣ ಮಟ್ಟಿನ ಸಾಲದ ಮೊತ್ತವನ್ನೇ ದೊಡ್ಡ ಸಮಸ್ಯೆಯನ್ನಾಗಿಸಿ ಜೀವನ ಮುಗಿಸಿದ್ದಾನೆ. ಸುರತ್ಕಲ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
A 20-year-old young man killed himself by drowning in Surathkal poice station limits on Monday, April 11. The deceased youth is Kandrik Lawrence D'Souza, son of 65-year-old Karnel D'Souza, a resident of Katipalla in Surathkal.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm