ಬ್ರೇಕಿಂಗ್ ನ್ಯೂಸ್
12-04-22 10:25 pm Mangalore Correspondent ಕರಾವಳಿ
ಮಂಗಳೂರು, ಎ.12: ವರ್ಷದ ಮೊದಲೇ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆ ನಡೆಸುತ್ತಿದೆ. ಏಕಕಾಲದಲ್ಲಿ ಮಂಗಳೂರು, ಬೆಳಗಾವಿ, ಮೈಸೂರಿನಲ್ಲಿ ಸಭೆ ನಡೆಸಲಾಗಿದ್ದು 2023ರ ಚುನಾವಣೆಯಲ್ಲಿ ಸ್ವಂತ ಶಕ್ತಿಯಲ್ಲಿ ಬಿಜೆಪಿಯನ್ನು ಗೆಲ್ಲಿಸುವುದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇದರ ಜೊತೆಗೆ ರಾಜ್ಯದಾದ್ಯಂತ ಏ.11ರಿಂದಲೇ ಮೂರು ತಂಡಗಳ ಮೂಲಕ ರಾಜ್ಯ ನಾಯಕರು ಪ್ರವಾಸ ಹಮ್ಮಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡವು, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ಪಕ್ಷದ ಪ್ರಮುಖರನ್ನು ಸೇರಿಸಿ ಚರ್ಚೆ ನಡೆಸಿದೆ. ಸದ್ಯದ ಬೆಳವಣಿಗೆ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಹೇಗಿದೆ, ಕ್ಷೇತ್ರವಾರು ಶಾಸಕರ ಬಗೆಗೆ ಜನರ ಪ್ರತಿಕ್ರಿಯೆ, ಹಿಜಾಬ್ ವಿವಾದ ಮತ್ತು ಆನಂತರದ ಬೆಳವಣಿಗೆಯಿಂದ ಪಕ್ಷಕ್ಕೆ ಆಗಿರುವ ಹಿನ್ನಡೆ ಮತ್ತು ಲಾಭಗಳೇನು ಎನ್ನುವ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಸಲಾಗಿದೆ.


ಈಗಾಗಲೇ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಮಾಹಿತಿ ಸಂಗ್ರಹ ನಡೆಯುತ್ತಿದ್ದು ಅದರ ನಡುವಲ್ಲೇ ಪಕ್ಷದ ಪ್ರಮುಖರನ್ನು ಕರೆಸಿ ನಾಯಕರು ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ 150 ಪ್ಲಸ್ ಸ್ಥಾನಗಳನ್ನು ಗೆಲ್ಲಬೇಕೆಂಬ ಅಮಿತ್ ಷಾ ಸೂಚನೆ ಹಿನ್ನೆಲೆಯಲ್ಲಿ ಏನೇನು ಕಾರ್ಯ ಆಗಬೇಕು, ಹಿಂದುತ್ವ ಮತ್ತು ಅಭಿವೃದ್ಧಿ ಕಾರ್ಯ ಮುಂದಿಟ್ಟು ಮತ ಗಳಿಸುವ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಇದರ ಜೊತೆಗೆ ಮುಸ್ಲಿಮ್ ವ್ಯಾಪಾರಸ್ಥರ ನಿಷೇಧ ಪ್ರಕ್ರಿಯೆಯಿಂದಾಗಿ ಕರಾವಳಿಯಲ್ಲಿ ಮತ ಕಳಕೊಳ್ಳುವ ಸ್ಥಿತಿ ಬರದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ಆ ರೀತಿಯ ಸನ್ನಿವೇಶವನ್ನು ಸಮತೋಲಿತವಾಗಿ ನೋಡಿಕೊಂಡು ಅಂತಹ ಪ್ರಕ್ರಿಯೆಗಳಿಗೆ ಹೆಚ್ಚು ಮಹತ್ವ ನೀಡದಂತೆ ನಾಯಕರು ಸೂಚನೆ ನೀಡಿದ್ದಾರೆ.


ಮಂಗಳೂರಿನ ಸಭೆಯಲ್ಲಿ ಸಿಎಂ ಬೊಮ್ಮಾಯಿ ಜೊತೆಗೆ ಸಂಸದ ಸದಾನಂದ ಗೌಡ, ಸಚಿವರಾದ ಅಶ್ವತ್ಥ ನಾರಾಯಣ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಶ್ರೀರಾಮುಲು, ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸೇರಿದಂತೆ ಮೂರು ಜಿಲ್ಲೆಗಳ ಪಕ್ಷದ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.
The BJP, which has begun assembly polls earlier in the year, is holding a meeting with division-level leaders. The meeting was held simultaneously in Mangalore, Belgaum and Mysore and led by CM Basavaraja Bommai and Arun Singh to win the BJP in their own power in the 2023 elections. In addition, the state leaders have toured the country through three teams since the A11.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm