ಬ್ರೇಕಿಂಗ್ ನ್ಯೂಸ್
13-04-22 10:33 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಮನೆಯಿಂದ ಧಿಡೀರ್ ಕಾಣೆಯಾಗಿ ಮನೆಯವರನ್ನು ದಂಗುಬಡಿಸಿದ್ದ ಬಾಲಕ ಕೊನೆಗೆ ಹುಡುಕಾಟದ ಬಳಿಕ ಅಜ್ಜಿ ಮನೆಯಲ್ಲಿ ಪತ್ತೆಯಾಗಿದ್ದು ಪೊಲೀಸರು, ಪೋಷಕರು ಮತ್ತು ಸ್ಥಳೀಯರನ್ನು ಬೇಸ್ತು ಬೀಳಿಸಿದೆ.
ಉಳ್ಳಾಲ ಬೈಲು ಗಣೇಶನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ ಮತ್ತು ರೋಹಿತ ಬ್ರಾಕ್ಸ್ ದಂಪತಿಯ ಪುತ್ರ ರಿಯಾನ್ (9) ಇಂದು ಮಧ್ಯಾಹ್ನ ಧಿಡೀರ್ ನಾಪತ್ತೆಯಾಗಿದ್ದ. ಬೆಳಗ್ಗೆ ಸ್ನೇಹಿತರೊಂದಿಗೆ ತೊಕ್ಕೊಟ್ಟು ಚರ್ಚ್ ಗೆ ತೆರಳಿದ್ದು ಮಧ್ಯಾಹ್ನ ವಾಪಾಸಾಗಿದ್ದ. ಆಬಳಿಕ ಪಕ್ಕದಲ್ಲೇ ಇರುವ ದೊಡ್ಡಮ್ಮನ ಮನೆಗೆ ತೆರಳಿದ್ದು ಅಲ್ಲಿದ್ದ ರಿಯಾನ್ ತಾಯಿ ಮನೆಯ ಕೀಲಿ ಕೈ ಕೊಟ್ಟು ರಿಯಾನಲ್ಲಿ ಮನೆಗೆ ಹೋಗಲು ಹೇಳಿದ್ದರು. ಆದರೆ 2 ಗಂಟೆ ಸುಮಾರಿಗೆ ತಾಯಿ ಮನೆಗೆ ತೆರಳಿದಾಗ ಕಿಟಕಿಯಲ್ಲಿ ಮನೆಯ ಕೀಲಿ ಕೈ ಮಾತ್ರ ಇದ್ದು ರಿಯಾನ್ ನಾಪತ್ತೆಯಾಗಿದ್ದ. ಗಾಬರಿಗೊಂಡ ರಿಯಾನ್ ಪೋಷಕರು, ಸ್ಥಳೀಯರು ಶೋಧ ನಡೆಸಿದ್ದು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಸಿಸಿಟಿವಿ ಪೂಟೇಜ್ ಪರಿಶೀಲಿಸಿ ಶೋಧ ಕಾರ್ಯ ಆರಂಭಿಸಿದ್ದರು.

ಅಜ್ಜಿ ಮನೆ ತೋಟದಲ್ಲಿದ್ದ ಬಾಲಕ !
ಇತ್ತ ಮನೆಮಂದಿ ರಿಯಾನ್ ಹುಡುಕಾಟದಲ್ಲಿ ತೊಡಗಿದ್ದರೆ, ಸಂಜೆ ಹೊತ್ತಲ್ಲಿ ಪಾವೂರು ಗ್ರಾಮದ ಇನೋಳಿಯ ಮಜಿಕಟ್ಟ ಎಂಬಲ್ಲಿ ತನ್ನ ಅಜ್ಜಿ ಮನೆಯ ತೋಟದಲ್ಲಿ ರಿಯಾನ್ ಪತ್ತೆಯಾಗಿದ್ದಾನೆ. ಒಂಬತ್ತು ವರ್ಷದ ಹುಡುಗ ಒಬ್ಬಂಟಿಯಾಗಿಯೇ ತೊಕ್ಕೊಟ್ಟಿನಿಂದ ಸಿಟಿ ಬಸ್ಸೊಂದನ್ನ ಏರಿ ಇನೋಳಿಗೆ ತೆರಳಿದ್ದು ಅಲ್ಲಿನ ಮನೆಗೂ ಹೋಗದೆ ತೋಟದಲ್ಲಿ ಅಡಿಕೆ ಹೆಕ್ಕುತ್ತಿರುವಂತೆ ನಟಿಸಿದ್ದಾನೆ.
ಅಜ್ಜ , ಅಜ್ಜಿ ಸಾವನ್ನಪ್ಪಿದ್ದು ಮನೆಯಲ್ಲಿದ್ದ ಚಿಕ್ಕಮ್ಮನಿಗೆ ರಿಯಾನ್ ಬಂದ ವಿಚಾರ ತಡವಾಗಿ ತಿಳಿದುಬಂದಿತ್ತು. ರಿಯಾನ್ ನಾಪತ್ತೆ ಬಗ್ಗೆ ಜಾಲತಾಣದಲ್ಲಿ ಸಂದೇಶವನ್ನು ನೋಡಿದ ಚಿಕ್ಕಮ್ಮ ರಿಯಾನ್ ತಮ್ಮಲ್ಲಿ ಇರುವ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ. ಸಂಜೆ ರಿಯಾನ್ ಮತ್ತೆ ನಗು, ನಗುತ್ತಾ ತಾಯಿ ಮನೆಗೆ ಮರಳಿದ್ದು ಪೋಷಕರು, ಸ್ಥಳೀಯರು ನೆಮ್ಮದಿಯ ನಗು ಬೀರಿದ್ದಾರೆ.
ಬಾಲಕ ದಿಢೀರ್ ನಾಪತ್ತೆ ; ಉಳ್ಳಾಲದ ಮನೆಯಿಂದಲೇ ಅಪಹರಣ ಶಂಕೆ, ಪೊಲೀಸರಿಂದ ಶೋಧ ಕಾರ್ಯ
Ullal missing youth found in grannys house finally in Mangalore. The nine year old boy was found missing after he came back from the church.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm