ಬ್ರೇಕಿಂಗ್ ನ್ಯೂಸ್
13-04-22 10:33 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಮನೆಯಿಂದ ಧಿಡೀರ್ ಕಾಣೆಯಾಗಿ ಮನೆಯವರನ್ನು ದಂಗುಬಡಿಸಿದ್ದ ಬಾಲಕ ಕೊನೆಗೆ ಹುಡುಕಾಟದ ಬಳಿಕ ಅಜ್ಜಿ ಮನೆಯಲ್ಲಿ ಪತ್ತೆಯಾಗಿದ್ದು ಪೊಲೀಸರು, ಪೋಷಕರು ಮತ್ತು ಸ್ಥಳೀಯರನ್ನು ಬೇಸ್ತು ಬೀಳಿಸಿದೆ.
ಉಳ್ಳಾಲ ಬೈಲು ಗಣೇಶನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ ಮತ್ತು ರೋಹಿತ ಬ್ರಾಕ್ಸ್ ದಂಪತಿಯ ಪುತ್ರ ರಿಯಾನ್ (9) ಇಂದು ಮಧ್ಯಾಹ್ನ ಧಿಡೀರ್ ನಾಪತ್ತೆಯಾಗಿದ್ದ. ಬೆಳಗ್ಗೆ ಸ್ನೇಹಿತರೊಂದಿಗೆ ತೊಕ್ಕೊಟ್ಟು ಚರ್ಚ್ ಗೆ ತೆರಳಿದ್ದು ಮಧ್ಯಾಹ್ನ ವಾಪಾಸಾಗಿದ್ದ. ಆಬಳಿಕ ಪಕ್ಕದಲ್ಲೇ ಇರುವ ದೊಡ್ಡಮ್ಮನ ಮನೆಗೆ ತೆರಳಿದ್ದು ಅಲ್ಲಿದ್ದ ರಿಯಾನ್ ತಾಯಿ ಮನೆಯ ಕೀಲಿ ಕೈ ಕೊಟ್ಟು ರಿಯಾನಲ್ಲಿ ಮನೆಗೆ ಹೋಗಲು ಹೇಳಿದ್ದರು. ಆದರೆ 2 ಗಂಟೆ ಸುಮಾರಿಗೆ ತಾಯಿ ಮನೆಗೆ ತೆರಳಿದಾಗ ಕಿಟಕಿಯಲ್ಲಿ ಮನೆಯ ಕೀಲಿ ಕೈ ಮಾತ್ರ ಇದ್ದು ರಿಯಾನ್ ನಾಪತ್ತೆಯಾಗಿದ್ದ. ಗಾಬರಿಗೊಂಡ ರಿಯಾನ್ ಪೋಷಕರು, ಸ್ಥಳೀಯರು ಶೋಧ ನಡೆಸಿದ್ದು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಸಿಸಿಟಿವಿ ಪೂಟೇಜ್ ಪರಿಶೀಲಿಸಿ ಶೋಧ ಕಾರ್ಯ ಆರಂಭಿಸಿದ್ದರು.

ಅಜ್ಜಿ ಮನೆ ತೋಟದಲ್ಲಿದ್ದ ಬಾಲಕ !
ಇತ್ತ ಮನೆಮಂದಿ ರಿಯಾನ್ ಹುಡುಕಾಟದಲ್ಲಿ ತೊಡಗಿದ್ದರೆ, ಸಂಜೆ ಹೊತ್ತಲ್ಲಿ ಪಾವೂರು ಗ್ರಾಮದ ಇನೋಳಿಯ ಮಜಿಕಟ್ಟ ಎಂಬಲ್ಲಿ ತನ್ನ ಅಜ್ಜಿ ಮನೆಯ ತೋಟದಲ್ಲಿ ರಿಯಾನ್ ಪತ್ತೆಯಾಗಿದ್ದಾನೆ. ಒಂಬತ್ತು ವರ್ಷದ ಹುಡುಗ ಒಬ್ಬಂಟಿಯಾಗಿಯೇ ತೊಕ್ಕೊಟ್ಟಿನಿಂದ ಸಿಟಿ ಬಸ್ಸೊಂದನ್ನ ಏರಿ ಇನೋಳಿಗೆ ತೆರಳಿದ್ದು ಅಲ್ಲಿನ ಮನೆಗೂ ಹೋಗದೆ ತೋಟದಲ್ಲಿ ಅಡಿಕೆ ಹೆಕ್ಕುತ್ತಿರುವಂತೆ ನಟಿಸಿದ್ದಾನೆ.
ಅಜ್ಜ , ಅಜ್ಜಿ ಸಾವನ್ನಪ್ಪಿದ್ದು ಮನೆಯಲ್ಲಿದ್ದ ಚಿಕ್ಕಮ್ಮನಿಗೆ ರಿಯಾನ್ ಬಂದ ವಿಚಾರ ತಡವಾಗಿ ತಿಳಿದುಬಂದಿತ್ತು. ರಿಯಾನ್ ನಾಪತ್ತೆ ಬಗ್ಗೆ ಜಾಲತಾಣದಲ್ಲಿ ಸಂದೇಶವನ್ನು ನೋಡಿದ ಚಿಕ್ಕಮ್ಮ ರಿಯಾನ್ ತಮ್ಮಲ್ಲಿ ಇರುವ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ. ಸಂಜೆ ರಿಯಾನ್ ಮತ್ತೆ ನಗು, ನಗುತ್ತಾ ತಾಯಿ ಮನೆಗೆ ಮರಳಿದ್ದು ಪೋಷಕರು, ಸ್ಥಳೀಯರು ನೆಮ್ಮದಿಯ ನಗು ಬೀರಿದ್ದಾರೆ.
ಬಾಲಕ ದಿಢೀರ್ ನಾಪತ್ತೆ ; ಉಳ್ಳಾಲದ ಮನೆಯಿಂದಲೇ ಅಪಹರಣ ಶಂಕೆ, ಪೊಲೀಸರಿಂದ ಶೋಧ ಕಾರ್ಯ
Ullal missing youth found in grannys house finally in Mangalore. The nine year old boy was found missing after he came back from the church.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm