ಬ್ರೇಕಿಂಗ್ ನ್ಯೂಸ್
14-04-22 10:13 pm Udupi Correspondent ಕರಾವಳಿ
ಉಡುಪಿ, ಎ.14: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಉಡುಪಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಂತೋಷ್ ಸಾವಿನ ಪ್ರಕರಣದಲ್ಲಿ ನಾನಾ ರೀತಿಯ ಸಂಶಯಗಳು, ಪ್ರಶ್ನೆಗಳಿದ್ದು, ಈ ಬಗ್ಗೆ ಉತ್ತರ ಕಂಡುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಇದಕ್ಕಾಗಿ ಸಂತೋಷ್ ಪಾಟೀಲ್ ಜೊತೆಗೆ ಬಂದಿದ್ದ ಇಬ್ಬರು ಸ್ನೇಹಿತರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಸಂತೋಷ್ ಪಾಟೀಲ್ ಸಾವಿನಲ್ಲಿ ಇಬ್ಬರು ಸ್ನೇಹಿತರೇ ಪ್ರಬಲ ಸಾಕ್ಷೀದಾರರು. ಎ.11ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಉಡುಪಿಗೆ ಬಂದಿದ್ದರಿಂದ ಅದೇ ದಿನ ಸಂತೋಷ್ ಪಾಟೀಲ್ ಮುಖ್ಯಮಂತ್ರಿ ಭೇಟಿಗಾಗಿ ಆಗಮಿಸಿದ್ದರೇ ಎನ್ನುವ ಸಂದೇಹಗಳಿವೆ. ಸಿಎಂ ಭೇಟಿಗಾಗಿ ಉಡುಪಿಗೆ ಬಂದಿದ್ದು ಹೌದಾಗಿದ್ದರೆ ಯಾಕೆ ಭೇಟಿ ಸಾಧ್ಯವಾಗಿಲ್ಲ ಎನ್ನುವ ಬಗ್ಗೆಯೂ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಉತ್ತರ ಪಡೆಯಲು ಆತನ ಜೊತೆಗಿದ್ದ ಸ್ನೇಹಿತರಾದ ಸಂತೋಷ್ ಮಡಿಕೇರಿ ಮತ್ತು ಪ್ರಶಾಂತ್ ಬೈಂದೂರು ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಸಂತೋಷ್ ಪಾಟೀಲ್ ಸಾವಿನ ಬಗ್ಗೆ ತಿಳಿದು ಎರಡು ದಿನ ಕಳೆದರೂ, ಆತನ ಜೊತೆಗಿದ್ದವರು ಮಾಧ್ಯಮದ ಮುಂದೆ ಬಂದಿಲ್ಲ. ಇಬ್ಬರು ಸ್ನೇಹಿತರು ಜೊತೆಗಿದ್ದರು ಅನ್ನೋದು ಪೊಲೀಸರಿಂದ ತಿಳಿಸಿರುವ ಮಾಹಿತಿಯಷ್ಟೇ. ಹಾಗಾಗಿ ಅವರಿಬ್ಬರನ್ನೂ ಪೊಲೀಸರು ನಿಗೂಢ ಜಾಗದಲ್ಲಿ ಇಟ್ಟಿರುವ ಸಾಧ್ಯತೆ ಬಗ್ಗೆ ಅನುಮಾನಗಳಿವೆ. ಬುಧವಾರ ಸಂಜೆಯಷ್ಟೇ ವಿಧಿ ವಿಜ್ಞಾನ ತಜ್ಞರ ಪರಿಶೀಲನೆ ಮತ್ತು ಶವದ ಪೋಸ್ಟ್ ಮಾರ್ಟಂ ನಡೆದಿದ್ದು, ಅದರ ವರದಿ ಬಂದ ಬಳಿಕ ಸಾಕಷ್ಟು ಅನುಮಾನಗಳಿಗೆ ಉತ್ತರ ಸಿಗಲಿದೆ.
ಸಂತೋಷ್ ಪಾಟೀಲ್ ಮೃತದೇಹ ಇದ್ದ ಕೊಠಡಿಯಲ್ಲಿ ಆತ ಒಬ್ಬಂಟಿಯಾಗಿದ್ದುದಲ್ಲದೆ, ಬಿಸ್ಕೆಟ್ ಪ್ಯಾಕ್, ಕೋಲ್ಡ್ ಡ್ರಿಂಕ್ಸ್ ಬಾಟಲಿ ಮತ್ತು ಕಸದ ಬುಟ್ಟಿಯಲ್ಲಿ ವಿಷದ ಬಾಟಲಿ ಪತ್ತೆಯಾಗಿತ್ತು. ಈ ಮೂರನ್ನೂ ಸಂತೋಷ್ ಪಾಟೀಲ್ ಸ್ನೇಹಿತರ ಜೊತೆಗೆ ಬರುವಾಗಲೇ ಪಡೆದುಕೊಂಡು ಬಂದಿದ್ದರೆ ಜೊತೆಗಿದ್ದವರಿಗೆ ತಿಳಿಯಲಿಲ್ಲವೇ..? ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳವುದು ಸ್ನೇಹಿತರಿಗೆ ತಿಳಿದಿತ್ತೇ ಅಥವಾ ಹೊರಗಿನ ವ್ಯಕ್ತಿಗಳು ವಿಷ ಬೆರಸಿ ಕೊಟ್ಟಿದ್ದರೇ ಇತ್ಯಾದಿ ಅನುಮಾನಗಳಿವೆ. ಇದಲ್ಲದೆ, ಸಾವಿಗೆ ಶರಣಾಗುವ ಬಗ್ಗೆ ಸಂತೋಷ್ ಪಾಟೀಲ್ ತನ್ನ ಕುಟುಂಬಿಕರಿಗೆ ಯಾವುದೇ ಸುಳಿವು ಕೊಟ್ಟಿರಲಿಲ್ಲ. ಮುನ್ನಾ ದಿನವೂ ಪತ್ನಿ ಮತ್ತು ಮಗುವಿನ ಜೊತೆ ಸಹಜವಾಗಿಯೇ ಮಾತನಾಡಿದ್ದ. ಹೀಗಾಗಿ ಸಾವಿನ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ.
ಸಂತೋಷ್ ಪಾಟೀಲ್ ಮೊಬೈಲ್, ಕೊನೆಯ ಬಾರಿಗೆ ಮಾಡಿರುವ ಕರೆಗಳು, ಸ್ನೇಹಿತರ ಜೊತೆಗೆ ಯಾರೆಲ್ಲ ಸಂಪರ್ಕದಲ್ಲಿದ್ದರು ಇತ್ಯಾದಿ ವಿಚಾರಗಳ ಬಗ್ಗೆ ತನಿಖೆ ಸಾಗಿದೆ. ಇದೇ ವೇಳೆ ಉಡುಪಿ ನಗರ ಪೊಲೀಸರು ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಕುಂದಾಪುರ, ಚಿಕ್ಕಮಗಳೂರಿಗೆ ತೆರಳಿ ಕಾರ್ಯಾಚರಣೆ ಆರಂಭಿಸಿದೆ. ಸಾವಿಗೂ ಹಿಂದಿನ ಒಂದು ವಾರ ಕಾಲ ಸಂತೋಷ್ ಪಾಟೀಲ್ ಮನೆಗೆ ತೆರಳಿರಲಿಲ್ಲ. ಈ ಸಂದರ್ಭದಲ್ಲಿ ಆತ ಎಲ್ಲೆಲ್ಲಿ ಓಡಾಡಿದ್ದ, ಯಾರನ್ನೆಲ್ಲ ಭೇಟಿಯಾಗಿದ್ದ, ಸಂತೋಷ್ ಕೊಲೆಗೆ ಯಾರಾದ್ರೂ ಹಿಡನ್ ಜಾಲ ಹೆಣೆದಿದ್ದರೇ ಎನ್ನುವ ಬಗ್ಗೆಯೂ ತನಿಖೆಯ ಜಾಡು ಸಾಗಿದೆ. ಉಡುಪಿ ನಗರ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಅವರನ್ನು ಪ್ರಕರಣದ ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
The Santosh suicide case has become a high profile one in the state political circles, causing upheavals in the state's polity. Many questions are being raised about Santosh's unnatural death. Why did a Belagavi contractor come to Udupi to end his life? What were his plans when CM Bommai was on a visit to Udupi on April 11 for which he was invited? Whom did he want to meet?
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm