ಬ್ರೇಕಿಂಗ್ ನ್ಯೂಸ್
16-04-22 07:49 pm Mangalore Correspondent ಕರಾವಳಿ
ಮಂಗಳೂರು, ಎ.16: ಹಿಂದಿನವರು ಹಾಗೆ ಮಾಡಿದ್ದಾರೆ, ಹೀಗೆ ಮಾಡಿದ್ದಾರೆ ಎಂದು ಸಮರ್ಥಿಸಲು ಇವರೇನು ವ್ಯಾಪಾರ ಮಾಡುತ್ತಿದ್ದಾರೆಯೇ.. ಹಿಂದಿನವರು ಭ್ರಷ್ಟಾಚಾರದಲ್ಲಿ ತೊಡಗಿದ್ದರೆ, ಇವರೀಗ ಸರಕಾರ ನಡೆಸುತ್ತಿದ್ದಾರೆ. ಹಿಂದಿನದ್ದೆಲ್ಲವನ್ನೂ ತನಿಖೆ ನಡೆಸಲಿ, ಯಡಿಯೂರಪ್ಪ ಕಾಲದಲ್ಲಿ ಏನಾಗಿದೆ, ಎಸ್ಸೆಂ ಕೃಷ್ಣ ಕಾಲದಲ್ಲಿ ಏನೆಲ್ಲಾ ಆಗಿತ್ತು ಎಲ್ಲವೂ ತನಿಖೆ ಆಗಲಿ. ಅದಕ್ಕೊಂದು ಆಯೋಗ ರಚಿಸಲಿ. ನಾವು ಕೇಳ್ತಾ ಇರೋದು, ಈಗ ಆಗ್ತಿರೋ ಭ್ರಷ್ಟಾಚಾರದ ಬಗ್ಗೆ. ಹಳೆಯದನ್ನು ಹೇಳಿಕೊಂಡು ಸಮರ್ಥನೆ ಮಾಡೋದು ಮುಖ್ಯಮಂತ್ರಿ ಹುದ್ದೆಗೆ ಶೋಭೆ ತರಲ್ಲ ಎಂದು ಮಾಜಿ ಡಿಸಿಎಂ, ಹಿರಿಯ ಕಾಂಗ್ರೆಸ್ ಮುಖಂಡ ಜಿ.ಪರಮೇಶ್ವರ್, ಸಿಎಂ ಬೊಮ್ಮಾಯಿಗೆ ತಿರುಗೇಟು ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಪ್ರತೀ ಬಾರಿಯೂ ಸಿದ್ದರಾಮಯ್ಯ ಕಾಲದಲ್ಲಿ ಮಾಡಿಲ್ಲವೇ ಎಂದು ಮರು ಪ್ರಶ್ನೆ ಹಾಕುತ್ತಾರೆ. ಹಿಂದಿನ ಸರಕಾರದಲ್ಲಿ ತಪ್ಪು ಆಗಿದ್ದರೆ ಇವರು ತನಿಖೆ ಮಾಡಿಸಲಿ. ಯಾರು ಬೇಡ ಎಂದಿದ್ದು. ಇವರು ಹಳೆಯದನ್ನು ಹೇಳಿ ಈಗಿನದ್ದನ್ನು ಮರೆ ಮಾಚಲು ಸಾಧ್ಯವಾಗಲ್ಲ. ಈಶ್ವರಪ್ಪ ಮತ್ತು ಬಿಜೆಪಿ ಸರಕಾರದ ವಿರುದ್ಧ ನಲ್ವತ್ತು ಪರ್ಸೆಂಟ್ ಕಮಿಷನ್ ಪಡೆಯುತ್ತಿರುವ ಬಗ್ಗೆ ಒಂದು ವರ್ಷದ ಹಿಂದೆಯೇ ಗುತ್ತಿಗೆದಾರರ ಸಂಘದ ಕೃಷ್ಣಪ್ಪ ಎಂಬವರು ಪ್ರಧಾನಿಗೆ ದೂರು ನೀಡಿದ್ದರು. ಯಾಕೆ ಪ್ರಧಾನಿ ಮೋದಿ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.
ಗುತ್ತಿಗೆದಾರರ ಸಂಘದ ಕೆಂಪಣ್ಣ ಸರಣಿಯಾಗಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾಮಗಾರಿ ನಿಲ್ಲಿಸುವ ಬೆದರಿಕೆ ಹಾಕಿದ್ದಾರೆ. ಇಂಥ ಭ್ರಷ್ಟರು ಸರಕಾರ ನಡೆಸುತ್ತಿದ್ದಾರೆ ಎನ್ನುವುದಕ್ಕೆ ಬೇರೆ ದಾಖಲೆ ಬೇಕೆ ಎಂದು ಹೇಳಿದ ಪರಮೇಶ್ವರ್, ಕುಮಾರಸ್ವಾಮಿಯವರು ಯಾವ ಆಧಾರದಲ್ಲಿ ಸಮರ್ಥನೆ ಮಾಡಿದ್ದಾರೋ ಗೊತ್ತಿಲ್ಲ. ಈಶ್ವರಪ್ಪ ವಿರುದ್ಧದ ಭ್ರಷ್ಚಾಚಾರವನ್ನು ಸಮರ್ಥನೆ ಮಾಡೋದಾದ್ರೆ ಇವರಿಗೆ ಸಾರ್ವಜನಿಕ ಜೀವನದಲ್ಲಿರುವ ನೈತಿಕತೆ ಇಲ್ಲ. ಅವರು ಸಮರ್ಥನೆ ಮಾಡಿಕೊಂಡು ಹೋಗಲಿ. ನಾವು ಗುತ್ತಿಗೆದಾರನಿಗೆ ನ್ಯಾಯ ಸಿಗಬೇಕೆಂದು ಹೋರಾಟ ಮಾಡುತ್ತೇವೆ. ಈಶ್ವರಪ್ಪ ಬಂಧಿಸದೆ ನಾವು ಹೋರಾಟ ನಿಲ್ಲಿಸಲ್ಲ ಎಂದು ಹೇಳಿದರು.
The district Congress staged protest here at Clock Tower on Saturday April 16 against minister K S Eshwarappa in connection to contractor Santhosh Patil suicide case.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm