ಬ್ರೇಕಿಂಗ್ ನ್ಯೂಸ್
20-04-22 10:21 pm Mangalore Correspondent ಕರಾವಳಿ
ಮಂಗಳೂರು ಎಪ್ರಿಲ್ 20 : ಹ್ಯಾಂಡ್ ಬ್ರೇಕ್ ಹಾಕಿ ಪಾರ್ಕ್ ಮಾಡಿದ್ದ ಬೃಹತ್ ಕಂಟೇನರ್ ಲಾರಿಯೊಂದು ಡ್ರೈವರ್ ಇಲ್ಲದೆ ಹಿಂದಕ್ಕೆ ಚಲಿಸಿದ ಘಟನೆ ತಲಪಾಡಿ ಟೋಲ್ ಗೇಟ್ ನಲ್ಲಿ ನಡೆದಿದ್ದು, ಟೋಲ್ ಸೆಕ್ಯುರಿಟಿ ಗಾರ್ಡ್ ಸಿಬಂದಿ ಸಹಿತ ಬೈಕಿನಲ್ಲಿ ತೆರಳುತ್ತಿದ್ದ ದಂಪತಿ ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ರಾತ್ರಿ ತಲಪಾಡಿ ಟೋಲ್ ಗೇಟ್ ಬಳಿ ಘಟನೆ ನಡೆದಿದೆ. ದೆಹಲಿಯಿಂದ ಕೊಚ್ಚಿಗೆ ತೆರಳುತ್ತಿದ್ದ ಗಣಪತಿ ಲಾಜಿಸ್ಟಿಕ್ಸ್ ಸಂಸ್ಥೆಗೆ ಸೇರಿದ ಕಂಟೇನರ್ ಲಾರಿಯನ್ನು ಚಾಲಕ ಜೈವೀರ್ ಸಿಂಗ್ (60) ತಲಪಾಡಿ ಟೋಲ್ ದಾಟಿ ರಸ್ತೆ ಬದಿ ನಿಲ್ಲಿಸಿದ್ದ. ಲಾರಿಯನ್ನು ಹ್ಯಾಂಡ್ ಬ್ರೇಕ್ ಹಾಕಿ ನಿಲ್ಲಿಸಿ ಕ್ಯಾಂಟೀನಲ್ಲಿ ಚಹಾ ಕುಡಿಯುತ್ತಿದ್ದಾಗ ಹ್ಯಾಂಡ್ ಬ್ರೇಕ್ ಕೈಕೊಟ್ಟು ಲಾರಿ ಡ್ರೈವರ್ ಇಲ್ಲದೆ ಹಿಂದಕ್ಕೆ ಚಲಿಸಿದೆ. ಲಾರಿ ಹಿಂದಕ್ಕೆ ಚಲಿಸುತ್ತಾ ಹೋಗಿ ರಿಕ್ಷಾ ಹಾಗೂ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿದೆ. ಅಲ್ಲದೆ, ಟೋಲ್ ಗೇಟ್ನಲ್ಲಿರುವ ಸೆನ್ಸರ್ ಗೇಟ್ ಮತ್ತು ಸೆಕ್ಯುರಿಟಿ ಇರುತ್ತಿದ್ದ ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ನೂರು ಮೀಟರ್ ಉದ್ದಕ್ಕೆ ಇಳಿಜಾರಿನಲ್ಲಿ ಬಂದಿದ್ದು ವಾಹನಗಳು ಕಡಿಮೆ ಇದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
ಟೋಲ್ನಲ್ಲಿ ಕರ್ತವ್ಯದಲ್ಲಿದ್ದ ಸತೀಶ್ ನಾರ್ಲ ಪಡೀಲು, ಅಶೋಕ್ ಹಾಗೂ ಕೇರಳ ಕಡೆಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ದಂಪತಿ ಲಾರಿಯು ಹಿಂದಕ್ಕೆ ಬರುವುದನ್ನು ನೋಡಿ ತಪ್ಪಿಸಿಕೊಂಡು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಒಂದು ಲಕ್ಷದಷ್ಟು ನಷ್ಟ ಆಗಿದೆ. ರಂಜಾನ್ ತಿಂಗಳಾದ್ದರಿಂದ ಹೆಚ್ಚು ವಾಹನಗಳು ಇರಲಿಲ್ಲ. ವಾಹನಗಳು ಇರುತ್ತಿದ್ದರೆ ಅಪಾಯ ಆಗುತ್ತಿತ್ತು ಎಂದು ಟೋಲ್ ಸಿಬಂದಿ ಹೇಳಿದ್ದಾರೆ.
A couple and a few staff had a miraculous escape after stationed container truck moved backwards and hit the toll gate structure at Talapady following technical problem in handbrake.It is gathered that the driver had parked the truck and been for tea. But, due to technical problem, the truck moved backwards for about a kilometre. The incident took place on reported on Tuesday night.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm