ಬ್ರೇಕಿಂಗ್ ನ್ಯೂಸ್
21-04-22 11:45 am Mangalore Correspondent ಕರಾವಳಿ
ಮಂಗಳೂರು, ಎ.21: 'ಒಂದು ದೇಶ, ಒಂದೇ ಜನ’ ಎಂಬ ಸಂದೇಶ ಹಿಡಿದು ತನ್ನ 21ನೇ ವಯಸ್ಸಿನಲ್ಲಿ ಏಕಾಂಗಿಯಾಗಿ ಬೈಕಿನಲ್ಲಿ ಭಾರತ ಪರ್ಯಟನೆ ಆರಂಭಿಸಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ನಿವಾಸಿ ಅಮೃತಾ ಜೋಶಿ 60 ದಿವಸಗಳ ಸಂಚಾರ ಪೂರೈಸಿದ್ದಾರೆ.
2022ರ ಫೆಬ್ರವರಿ 5ರಂದು ಕೇರಳದ ಕಲ್ಲಿಕೋಟೆಯಿಂದ ಸಂಚಾರ ಆರಂಭಿಸಿದ್ದ ಅಮೃತಾ ಜೋಶಿ ತಮಿಳುನಾಡು, ಆಂಧ್ರ ಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಲ, ಅಸ್ಸಾಂ, ಮೇಘಾಲಯ, ತ್ರಿಪುರಾ, ಮಿಜೋರಾಂ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಸಿಕ್ಕಿಂ ರಾಜ್ಯಗಳನ್ನು ಸಂದರ್ಶಿಸಿದ್ದಾರೆ. ಈಶಾನ್ಯ ರಾಜ್ಯಗಳ ಭೇಟಿಯ ಜೊತೆಗೆ ನೆರೆಯ ಬಾಂಗ್ಲಾದೇಶ, ಮ್ಯಾನ್ಮಾರ್ಗಳನ್ನು ಕೂಡ ಅಮೃತಾ ಸಂದರ್ಶಿಸಿದ್ದಾರೆ. ಇದುವರೆಗೆ 8,040 ಕಿ.ಮೀ. ಯಾನ ಪೂರೈಸಿದ್ದಾಗಿ ಅಮೃತಾ ತಿಳಿಸಿದ್ದಾರೆ.
ಮುಂದೆ ನೇಪಾಳದಿಂದ ಆರಂಭಿಸಿ ಬಿಹಾರ, ಝಾರ್ಖಂಡ್, ಛತ್ತೀಸ್ಗಢ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಲಡಾಖ್, ಪಂಜಾಬ್, ಹರಿಯಾಣ, ದಿಲ್ಲಿ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಗೋವಾ, ಕರ್ನಾಟಕ ತಲುಪಲಿದ್ದು ಕೊನೆಯಲ್ಲಿ ಕೇರಳದ ಕಾಸರಗೋಡಿನಲ್ಲಿ ಯಾತ್ರೆಯನ್ನು ಮುಕ್ತಾಯ ಮಾಡಲಿದ್ದಾರೆ.
“ಸಿ.ಆರ್.ಎಫ್ ವುಮೆನ್ ಆನ್ ವೀಲ್ಸ್’ ಎಂಬ ಕ್ಲಬ್ ಸದಸ್ಯೆಯಾಗಿರುವ ಅಮೃತಾ ಜೋಶಿ ಕುಂಬಳೆ ನಿವಾಸಿಗಳಾದ ದಿ| ಅಶೋಕ್ ಜೋಶಿ ಮತ್ತು ಅನ್ನಪೂರ್ಣ ಜೋಶಿ ದಂಪತಿಯ ಕಿರಿಯ ಪುತ್ರಿ. ಅಮೃತಾ ಜೋಶಿ ದೇಶ ಸಂಚಾರಕ್ಕೆ ವಿವಿಧ ಸಂಘಟನೆಗಳ ಬೆಂಬಲವೂ ಸಿಕ್ಕಿದೆ.
ಈಶಾನ್ಯ ರಾಜ್ಯದ ಪ್ರಯಾಣದ ಬಗ್ಗೆ ಎಲ್ಲರೂ ಆ ರಾಜ್ಯಗಳು ಸುರಕ್ಷಿತವಲ್ಲ ಎಂದಿದ್ದರು. ಆದರೆ ಈ ಯಾನದ ಬಳಿಕ ಈಶಾನ್ಯ ರಾಜ್ಯಗಳು ಸುರಕ್ಷಿತ ಸ್ಥಳ ಮತ್ತು ಅಲ್ಲಿನ ಜನರು ಮೃದು ಮನಸ್ಸಿನವರು ಎಂದು ಹೇಳುತ್ತೇನೆ. ಅವರ ಪ್ರೀತಿ ಮತ್ತು ಬೆಂಬಲದಿಂದಾಗಿ ಇಡೀ ಭಾರತ ಯಾನವನ್ನು ಪೂರ್ಣಗೊಳಿಸಲು ನಿರ್ಧರಿಸಿದ್ದೇನೆ ಎಂದು ಅಮೃತಾ ಜೋಶಿ ಹೇಳಿದ್ದಾರೆ.
Youngest solo rider Amrutha Joshi from Kerala to cover northeast by bike.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm