ಬ್ರೇಕಿಂಗ್ ನ್ಯೂಸ್
21-04-22 11:45 am Mangalore Correspondent ಕರಾವಳಿ
ಮಂಗಳೂರು, ಎ.21: 'ಒಂದು ದೇಶ, ಒಂದೇ ಜನ’ ಎಂಬ ಸಂದೇಶ ಹಿಡಿದು ತನ್ನ 21ನೇ ವಯಸ್ಸಿನಲ್ಲಿ ಏಕಾಂಗಿಯಾಗಿ ಬೈಕಿನಲ್ಲಿ ಭಾರತ ಪರ್ಯಟನೆ ಆರಂಭಿಸಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ನಿವಾಸಿ ಅಮೃತಾ ಜೋಶಿ 60 ದಿವಸಗಳ ಸಂಚಾರ ಪೂರೈಸಿದ್ದಾರೆ.
2022ರ ಫೆಬ್ರವರಿ 5ರಂದು ಕೇರಳದ ಕಲ್ಲಿಕೋಟೆಯಿಂದ ಸಂಚಾರ ಆರಂಭಿಸಿದ್ದ ಅಮೃತಾ ಜೋಶಿ ತಮಿಳುನಾಡು, ಆಂಧ್ರ ಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಲ, ಅಸ್ಸಾಂ, ಮೇಘಾಲಯ, ತ್ರಿಪುರಾ, ಮಿಜೋರಾಂ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಸಿಕ್ಕಿಂ ರಾಜ್ಯಗಳನ್ನು ಸಂದರ್ಶಿಸಿದ್ದಾರೆ. ಈಶಾನ್ಯ ರಾಜ್ಯಗಳ ಭೇಟಿಯ ಜೊತೆಗೆ ನೆರೆಯ ಬಾಂಗ್ಲಾದೇಶ, ಮ್ಯಾನ್ಮಾರ್ಗಳನ್ನು ಕೂಡ ಅಮೃತಾ ಸಂದರ್ಶಿಸಿದ್ದಾರೆ. ಇದುವರೆಗೆ 8,040 ಕಿ.ಮೀ. ಯಾನ ಪೂರೈಸಿದ್ದಾಗಿ ಅಮೃತಾ ತಿಳಿಸಿದ್ದಾರೆ.
ಮುಂದೆ ನೇಪಾಳದಿಂದ ಆರಂಭಿಸಿ ಬಿಹಾರ, ಝಾರ್ಖಂಡ್, ಛತ್ತೀಸ್ಗಢ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಲಡಾಖ್, ಪಂಜಾಬ್, ಹರಿಯಾಣ, ದಿಲ್ಲಿ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಗೋವಾ, ಕರ್ನಾಟಕ ತಲುಪಲಿದ್ದು ಕೊನೆಯಲ್ಲಿ ಕೇರಳದ ಕಾಸರಗೋಡಿನಲ್ಲಿ ಯಾತ್ರೆಯನ್ನು ಮುಕ್ತಾಯ ಮಾಡಲಿದ್ದಾರೆ.
“ಸಿ.ಆರ್.ಎಫ್ ವುಮೆನ್ ಆನ್ ವೀಲ್ಸ್’ ಎಂಬ ಕ್ಲಬ್ ಸದಸ್ಯೆಯಾಗಿರುವ ಅಮೃತಾ ಜೋಶಿ ಕುಂಬಳೆ ನಿವಾಸಿಗಳಾದ ದಿ| ಅಶೋಕ್ ಜೋಶಿ ಮತ್ತು ಅನ್ನಪೂರ್ಣ ಜೋಶಿ ದಂಪತಿಯ ಕಿರಿಯ ಪುತ್ರಿ. ಅಮೃತಾ ಜೋಶಿ ದೇಶ ಸಂಚಾರಕ್ಕೆ ವಿವಿಧ ಸಂಘಟನೆಗಳ ಬೆಂಬಲವೂ ಸಿಕ್ಕಿದೆ.
ಈಶಾನ್ಯ ರಾಜ್ಯದ ಪ್ರಯಾಣದ ಬಗ್ಗೆ ಎಲ್ಲರೂ ಆ ರಾಜ್ಯಗಳು ಸುರಕ್ಷಿತವಲ್ಲ ಎಂದಿದ್ದರು. ಆದರೆ ಈ ಯಾನದ ಬಳಿಕ ಈಶಾನ್ಯ ರಾಜ್ಯಗಳು ಸುರಕ್ಷಿತ ಸ್ಥಳ ಮತ್ತು ಅಲ್ಲಿನ ಜನರು ಮೃದು ಮನಸ್ಸಿನವರು ಎಂದು ಹೇಳುತ್ತೇನೆ. ಅವರ ಪ್ರೀತಿ ಮತ್ತು ಬೆಂಬಲದಿಂದಾಗಿ ಇಡೀ ಭಾರತ ಯಾನವನ್ನು ಪೂರ್ಣಗೊಳಿಸಲು ನಿರ್ಧರಿಸಿದ್ದೇನೆ ಎಂದು ಅಮೃತಾ ಜೋಶಿ ಹೇಳಿದ್ದಾರೆ.
Youngest solo rider Amrutha Joshi from Kerala to cover northeast by bike.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm