ಬ್ರೇಕಿಂಗ್ ನ್ಯೂಸ್
24-09-20 03:01 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಹಿರಿಯ ಧಾರ್ಮಿಕ ಮುಖಂಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ ಆಗಿರುವ ಅಲ್ಹಾಜ್ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಬೇಕಲ್ (71) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು, ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ, ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೂಲತಃ ಬಂಟ್ವಾಳ ತಾಲೂಕಿನ ನರಿಂಗಾನ ನಿವಾಸಿಯಾಗಿರುವ ಮುಸ್ಲಿಯಾರ್, ದೇವಬಂದ್ ಅರೆಬಿಕ್ ಕಾಲೇಜಿನಿಂದ ಪದವಿ ಪಡೆದಿದ್ದರು. ಸೂರಿಂಜೆ ಮತ್ತು ಬಂಟ್ವಾಳದ ಮಸೀದಿಗಳಲ್ಲಿ ತಲಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಸುದೀರ್ಘ 43 ವರ್ಷಗಳಿಂದ ಬೇಕಲದಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸುವ ಮೂಲಕ ‘ಬೇಕಲ್ ಉಸ್ತಾದ್’ ಎಂದೇ ಜನಪ್ರಿಯರಾಗಿದ್ದರು. ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಫೂಡಲ್ ಎಂಬಲ್ಲಿನ ಮುಹಮ್ಮದ್ ಮತ್ತು ಖದೀಜಾ ದಂಪತಿಯ ಪುತ್ರನಾಗಿ 1949ರಲ್ಲಿ ಜನಿಸಿದ್ದ ಅವರು ನರಿಂಗಾನ ಗ್ರಾಮದ ಡಿಜಿ ಕಟ್ಟೆಯ ಶಾಲೆಯಲ್ಲಿ 7ನೇ ತರಗತಿ ಕಲಿತ ಬಳಿಕ ಧಾರ್ಮಿಕ ಶಿಕ್ಷಣ ಕಲಿಯಲು ಆಸಕ್ತಿ ವಹಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಗೆ ‘ತಾಜುಲ್ ಫುಖಹಾಅ್’ ಎಂಬ ಬಿರುದು ಪಡೆದಿದ್ದಾರೆ. ಉಸ್ತಾದರು, ಕರ್ಮಶಾಸ್ತ್ರ, ಖಗೋಳಶಾಸ್ತ್ರದ ಬಗ್ಗೆ ಉನ್ನತ ಜ್ಞಾನ ಹೊಂದಿದ್ದರು.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am