ಬ್ರೇಕಿಂಗ್ ನ್ಯೂಸ್
24-09-20 03:37 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಈಗ ಕನ್ನಡದ ಖ್ಯಾತ ನಟಿ ಕಂ ಆಂಕರ್ ಅನುಶ್ರೀಗೂ ಸುತ್ತಿಕೊಂಡಿದೆ. ಮಂಗಳೂರಿನಲ್ಲಿ ವಾರದ ಹಿಂದೆ ಬಂಧಿಸಲ್ಪಟ್ಟ ಕಿಶೋರ್ ಶೆಟ್ಟಿ ಸಂಪರ್ಕದಲ್ಲಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಿಶೋರ್ ಶೆಟ್ಟಿ ಜೊತೆ ಸಂಪರ್ಕ ಇರುವ ಹಲವು ಯುವಕರು ಮತ್ತು ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ತರುಣ್ ಎಂಬಾತನನ್ನೂ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅನುಶ್ರೀ ಹೆಸರು ಹೇಳಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಆಕೆಯನ್ನು ವಿಚಾರಣೆ ನಡೆಸುವುದಕ್ಕಾಗಿ ಮಂಗಳೂರು ಪೊಲೀಸರು ನೋಟೀಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲೇ ಕಿಶೋರ್ ಶೆಟ್ಟಿ ಬಂಧನ ಆಗಿತ್ತು. ಆತನ ಬಂಧನ ಆಗುತ್ತಿದ್ದಂತೆ ಮೊದಲಿಗೆ ಕನ್ನಡದ ನಿರೂಪಕಿಯ ಹೆಸರು ಕೇಳಿಬಂದಿತ್ತು. ಅನುಶ್ರೀ ಮತ್ತು ಅಕುಲ್ ಜೊತೆ ಕಿಶೋರ್ ಶೆಟ್ಟಿಗೆ ನಂಟು ಇದೆ ಎನ್ನುವ ವದಂತಿ ಹರಡಿತ್ತು. ಆದರೆ ಇದ್ಯಾವುದೂ ಕನ್ಫರ್ಮ್ ಆಗಿರಲಿಲ್ಲ. ಇದೀಗ ಮಂಗಳೂರು ಮೂಲದ ನಟಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರೇ ನೋಟೀಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಕ್ಕೆ ಅನುಶ್ರೀ ತನಗೇನು ನೋಟೀಸ್ ಬಂದಿಲ್ಲ ಅಂತ ಉತ್ತರಿಸಿದ್ದಾರೆ.
ಕಿಶೋರ್ ಶೆಟ್ಟಿ ಮತ್ತು ಅಕಿಲ್ ನೌಶೀಲ್, ಡ್ರಗ್ ಪೆಡ್ಲರ್ ಆಗಿದ್ದು ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದರು. ಮಂಗಳೂರಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗ್ತಿತ್ತು. ಇದೀಗ ಅನುಶ್ರೀಗೆ ನೋಟೀಸ್ ನೀಡಿರುವ ಬಗ್ಗೆ ಮಂಗಳೂರು ಡಿಸಿಪಿ ವಿನಯ್ ಗಾಂವಕರ್ ಬಳಿ ಪ್ರಶ್ನೆ ಮಾಡಿದಾಗ ಪೋಲೀಸರು ನೋಟಿಸ್ ನೀಡಲು ಬೆಂಗಳೂರಿಗೆ ತೆರಳಿರುವುದಾಗಿ ತಿಳಿಸಿದ್ದಾರೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am