ಬ್ರೇಕಿಂಗ್ ನ್ಯೂಸ್
24-09-20 03:37 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಈಗ ಕನ್ನಡದ ಖ್ಯಾತ ನಟಿ ಕಂ ಆಂಕರ್ ಅನುಶ್ರೀಗೂ ಸುತ್ತಿಕೊಂಡಿದೆ. ಮಂಗಳೂರಿನಲ್ಲಿ ವಾರದ ಹಿಂದೆ ಬಂಧಿಸಲ್ಪಟ್ಟ ಕಿಶೋರ್ ಶೆಟ್ಟಿ ಸಂಪರ್ಕದಲ್ಲಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಿಶೋರ್ ಶೆಟ್ಟಿ ಜೊತೆ ಸಂಪರ್ಕ ಇರುವ ಹಲವು ಯುವಕರು ಮತ್ತು ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ತರುಣ್ ಎಂಬಾತನನ್ನೂ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅನುಶ್ರೀ ಹೆಸರು ಹೇಳಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಆಕೆಯನ್ನು ವಿಚಾರಣೆ ನಡೆಸುವುದಕ್ಕಾಗಿ ಮಂಗಳೂರು ಪೊಲೀಸರು ನೋಟೀಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲೇ ಕಿಶೋರ್ ಶೆಟ್ಟಿ ಬಂಧನ ಆಗಿತ್ತು. ಆತನ ಬಂಧನ ಆಗುತ್ತಿದ್ದಂತೆ ಮೊದಲಿಗೆ ಕನ್ನಡದ ನಿರೂಪಕಿಯ ಹೆಸರು ಕೇಳಿಬಂದಿತ್ತು. ಅನುಶ್ರೀ ಮತ್ತು ಅಕುಲ್ ಜೊತೆ ಕಿಶೋರ್ ಶೆಟ್ಟಿಗೆ ನಂಟು ಇದೆ ಎನ್ನುವ ವದಂತಿ ಹರಡಿತ್ತು. ಆದರೆ ಇದ್ಯಾವುದೂ ಕನ್ಫರ್ಮ್ ಆಗಿರಲಿಲ್ಲ. ಇದೀಗ ಮಂಗಳೂರು ಮೂಲದ ನಟಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರೇ ನೋಟೀಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಕ್ಕೆ ಅನುಶ್ರೀ ತನಗೇನು ನೋಟೀಸ್ ಬಂದಿಲ್ಲ ಅಂತ ಉತ್ತರಿಸಿದ್ದಾರೆ.
ಕಿಶೋರ್ ಶೆಟ್ಟಿ ಮತ್ತು ಅಕಿಲ್ ನೌಶೀಲ್, ಡ್ರಗ್ ಪೆಡ್ಲರ್ ಆಗಿದ್ದು ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದರು. ಮಂಗಳೂರಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗ್ತಿತ್ತು. ಇದೀಗ ಅನುಶ್ರೀಗೆ ನೋಟೀಸ್ ನೀಡಿರುವ ಬಗ್ಗೆ ಮಂಗಳೂರು ಡಿಸಿಪಿ ವಿನಯ್ ಗಾಂವಕರ್ ಬಳಿ ಪ್ರಶ್ನೆ ಮಾಡಿದಾಗ ಪೋಲೀಸರು ನೋಟಿಸ್ ನೀಡಲು ಬೆಂಗಳೂರಿಗೆ ತೆರಳಿರುವುದಾಗಿ ತಿಳಿಸಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm