ಬ್ರೇಕಿಂಗ್ ನ್ಯೂಸ್
25-04-22 09:07 pm Mangalore Correspondent ಕರಾವಳಿ
ಮಂಗಳೂರು, ಎ.25: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಆವರಣದಲ್ಲಿರುವ ತೋಕೂರು ಹಳ್ಳಕ್ಕೆ ಕೈಗಾರಿಕೆಗಳ ಮಾಲಿನ್ಯ ಬಿಡಲಾಗುತ್ತಿದ್ದು, ತ್ಯಾಜ್ಯ ನೀರಿನಿಂದಾಗಿ ಫಲ್ಗುಣಿ ನದಿ ಸೇರುವಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ. ಘಟನೆ ಬಗ್ಗೆ ಸ್ಥಳೀಯರ ದೂರಿನಂತೆ ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ತೋಕೂರು ಹಳ್ಳಕ್ಕೆ ಎಂಆರ್ ಪಿಎಲ್ ಕಡೆಯಿಂದ ನೀರು ಹರಿದು ಬರುತ್ತಿದೆ. ಅದು ಮುಂದೆ ತೋಕೂರು, ಜೋಕಟ್ಟೆ ಮೂಲಕ ಫಲ್ಗುಣಿ ನದಿ ಸೇರುತ್ತದೆ. ಪ್ರತಿ ಬಾರಿ ಬೇಸಗೆಯಲ್ಲಿ ಮಲಿನ ನೀರನ್ನು ಕೈಗಾರಿಕೆಗಳು ನದಿಗೆ ಬಿಡುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪರಿಸರದ ಬಾವಿಗಳಲ್ಲಿಯೂ ಕಲುಷಿತ ನೀರು ಸೇರುವಂತಾಗಿದೆ. ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶಗಳಿದ್ದರೂ, ಅದನ್ನು ನಿರ್ಲಕ್ಷಿಸಿದ್ದಾರೆ.





ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿಯೇ ತೋಕೂರು ಹಳ್ಳ ಇದೆ. ಇಲ್ಲಿ ಸದಾ ನೀರು ನಿಲ್ಲುವುದರಿಂದ ತ್ಯಾಜ್ಯವೂ ಸೇರ್ಪಡೆಗೊಂಡು ಪೂರ್ತಿ ಮಲಿನವಾಗಿದೆ. ಈಗ ಕಪ್ಪಗಿನ ಮಾಲಿನ್ಯ ನೀರಿನಲ್ಲಿ ಹರಿಯುತ್ತಿದ್ದು, ಫಲ್ಗುಣಿ ನದಿ ಸೇರುವಲ್ಲಿ ಕಲುಷಿತವಾಗಿದೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಫಲ್ಗುಣಿ ನದಿಯಲ್ಲಿ ಮೀನುಗಳು ಸತ್ತು ಬಿದ್ದಿರುವುದನ್ನು ಕಂಡು ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಜನರ ಕಣ್ಣೋಟಕ್ಕೆ ಭೇಟಿ ನೀಡಿ ಪರಿಶೀಲಿಸುವ ನಾಟಕ ಮಾಡಿದ್ದಾರೆ. ಆದರೆ, ಕೈಗಾರಿಕೆಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
Mangalore Factory water spilled to Palguni river, large number of fishes found dead, officials arrive at spot.
19-11-25 12:20 pm
HK News Desk
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am