ಬ್ರೇಕಿಂಗ್ ನ್ಯೂಸ್
28-04-22 01:39 pm Mangalore Correspondent ಕರಾವಳಿ
ಮಂಗಳೂರು, ಎ.28: ಕ್ರಿಶ್ಚಿಯನ್ ಶಾಲೆಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನ ನಡೆಸುವಂತಿಲ್ಲ. ಶಾಲೆಯ ಆವರಣದಲ್ಲಿ ಬೈಬಲ್, ಕುರಾನ್ ರೀತಿಯ ಧರ್ಮಾಧಾರಿತ ತರಗತಿಗಳಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪುನರುಚ್ಚರಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಯಾವ ಶಾಲೆಗಳು ಕರ್ನಾಟಕ ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿಕೊಂಡಿರುತ್ತವೋ ಆ ಎಲ್ಲಾ ಶಾಲೆಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಶಿಕ್ಷಣ ಕಾಯ್ದೆ ಪ್ರಕಾರ ಯಾವುದೇ ಧರ್ಮದ ಪಠ್ಯ ಪುಸ್ತಕವನ್ನ ಶಾಲೆಗಳಲ್ಲಿ ತರಲು ಅವಕಾಶವಿಲ್ಲ. ಆದರೆ ಕೆಲವು ಕ್ರಿಶ್ಚಿಯನ್ ಶಾಲೆಗಳಲ್ಲಿ ವಿದ್ಯಾರ್ಥಿಗಳು ಬೈಬಲ್ ತರಬೇಕು ಎಂಬ ನಿಯಮ ಮಾಡಿದ್ದಾರೆ. ಈ ಬಗ್ಗೆ ಶಾಲೆಯ ವೆಬ್ಸೈಟ್ನಲ್ಲೂ ನಮೂದಿಸಿದ್ದು, ಬೈಬಲ್ ನಿಯಮ ಪಾಲಿಸುವವರಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅವಕಾಶ ಅಂತ ತಿಳಿಸಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಪರೀಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಧರ್ಮಾಧಾರಿತ ಪಠ್ಯ ಬೋಧನೆಗೆ ಅವಕಾಶವಿಲ್ಲ ಎಂದಿದ್ದಾರೆ.

ಭಗವದ್ಗೀತೆ ಧರ್ಮಾಧಾರಿತವಲ್ಲ
ಬೈಬಲ್ ಹಾಗೂ ಕುರಾನ್ ಬಗ್ಗೆ ಮಾತ್ರ ಯಾಕೆ ಆಕ್ಷೇಪ ಎಂಬ ಪ್ರಶ್ನೆಗೆ, ಬೈಬಲ್, ಖುರಾನ್ ಧರ್ಮಾಧಾರಿತ ಗ್ರಂಥಗಳಾಗಿದ್ದು, ಇವುಗಳ ಆಚರಣೆ ಶಾಲೆಗಳಲ್ಲಿ ಬೇಡ. ಆದರೆ ಭಗವದ್ಗೀತೆ ಯಾವುದೇ ಧರ್ಮಾಧಾರಿತ ಗ್ರಂಥವಲ್ಲ. ಶಾಲೆಗಳಲ್ಲಿ ಭಗವದ್ಗೀತೆಯಲ್ಲಿರುವ ಮೌಲ್ಯಗಳನ್ನ ಹೇಳಿ ಕೊಡಲಾಗುತ್ತದೆ. ಕುರಾನ್, ಬೈಬಲ್ ರೀತಿ ಧರ್ಮಾಚರಣೆಗೆ ಉಪದೇಶ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಭಗವದ್ಗೀತೆಯನ್ನ ಬೈಬಲ್, ಕುರಾನ್ಗೆ ಹೋಲಿಕೆ ಮಾಡುವುದು ಸರಿಯಲ್ಲ ಅಂತ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಇತ್ತೀಚೆಗೆ ಕ್ರಿಶ್ಚಿಯನ್ ಶಾಲಾ ಕಾಲೇಜುಗಳ ಪಠ್ಯಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ. ಈಗಾಗಲೇ ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇವೆ. ಪರಿಶೀಲನೆ ವೇಳೆ ಶಾಲೆಗಳಲ್ಲಿ ಬೈಬಲ್ ಕಲಿಕೆ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Education minister Nagesh said that there is there is no chance for conducting religious classes in schools run by Christians.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm