ಬ್ರೇಕಿಂಗ್ ನ್ಯೂಸ್
28-04-22 01:39 pm Mangalore Correspondent ಕರಾವಳಿ
ಮಂಗಳೂರು, ಎ.28: ಕ್ರಿಶ್ಚಿಯನ್ ಶಾಲೆಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನ ನಡೆಸುವಂತಿಲ್ಲ. ಶಾಲೆಯ ಆವರಣದಲ್ಲಿ ಬೈಬಲ್, ಕುರಾನ್ ರೀತಿಯ ಧರ್ಮಾಧಾರಿತ ತರಗತಿಗಳಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪುನರುಚ್ಚರಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಯಾವ ಶಾಲೆಗಳು ಕರ್ನಾಟಕ ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿಕೊಂಡಿರುತ್ತವೋ ಆ ಎಲ್ಲಾ ಶಾಲೆಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಶಿಕ್ಷಣ ಕಾಯ್ದೆ ಪ್ರಕಾರ ಯಾವುದೇ ಧರ್ಮದ ಪಠ್ಯ ಪುಸ್ತಕವನ್ನ ಶಾಲೆಗಳಲ್ಲಿ ತರಲು ಅವಕಾಶವಿಲ್ಲ. ಆದರೆ ಕೆಲವು ಕ್ರಿಶ್ಚಿಯನ್ ಶಾಲೆಗಳಲ್ಲಿ ವಿದ್ಯಾರ್ಥಿಗಳು ಬೈಬಲ್ ತರಬೇಕು ಎಂಬ ನಿಯಮ ಮಾಡಿದ್ದಾರೆ. ಈ ಬಗ್ಗೆ ಶಾಲೆಯ ವೆಬ್ಸೈಟ್ನಲ್ಲೂ ನಮೂದಿಸಿದ್ದು, ಬೈಬಲ್ ನಿಯಮ ಪಾಲಿಸುವವರಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅವಕಾಶ ಅಂತ ತಿಳಿಸಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಪರೀಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಧರ್ಮಾಧಾರಿತ ಪಠ್ಯ ಬೋಧನೆಗೆ ಅವಕಾಶವಿಲ್ಲ ಎಂದಿದ್ದಾರೆ.

ಭಗವದ್ಗೀತೆ ಧರ್ಮಾಧಾರಿತವಲ್ಲ
ಬೈಬಲ್ ಹಾಗೂ ಕುರಾನ್ ಬಗ್ಗೆ ಮಾತ್ರ ಯಾಕೆ ಆಕ್ಷೇಪ ಎಂಬ ಪ್ರಶ್ನೆಗೆ, ಬೈಬಲ್, ಖುರಾನ್ ಧರ್ಮಾಧಾರಿತ ಗ್ರಂಥಗಳಾಗಿದ್ದು, ಇವುಗಳ ಆಚರಣೆ ಶಾಲೆಗಳಲ್ಲಿ ಬೇಡ. ಆದರೆ ಭಗವದ್ಗೀತೆ ಯಾವುದೇ ಧರ್ಮಾಧಾರಿತ ಗ್ರಂಥವಲ್ಲ. ಶಾಲೆಗಳಲ್ಲಿ ಭಗವದ್ಗೀತೆಯಲ್ಲಿರುವ ಮೌಲ್ಯಗಳನ್ನ ಹೇಳಿ ಕೊಡಲಾಗುತ್ತದೆ. ಕುರಾನ್, ಬೈಬಲ್ ರೀತಿ ಧರ್ಮಾಚರಣೆಗೆ ಉಪದೇಶ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಭಗವದ್ಗೀತೆಯನ್ನ ಬೈಬಲ್, ಕುರಾನ್ಗೆ ಹೋಲಿಕೆ ಮಾಡುವುದು ಸರಿಯಲ್ಲ ಅಂತ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಇತ್ತೀಚೆಗೆ ಕ್ರಿಶ್ಚಿಯನ್ ಶಾಲಾ ಕಾಲೇಜುಗಳ ಪಠ್ಯಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ. ಈಗಾಗಲೇ ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇವೆ. ಪರಿಶೀಲನೆ ವೇಳೆ ಶಾಲೆಗಳಲ್ಲಿ ಬೈಬಲ್ ಕಲಿಕೆ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Education minister Nagesh said that there is there is no chance for conducting religious classes in schools run by Christians.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 05:02 pm
Mangalore Correspondent
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm