ಬ್ರೇಕಿಂಗ್ ನ್ಯೂಸ್
24-09-20 08:54 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 24: ಆಕೆಯದು ಸಣ್ಣ ವಯಸ್ಸಾದ್ರೂ ಕೊರೊನಾ ಲಾಕ್ಡೌನ್ ವೇಳೆಯನ್ನು ವೇಸ್ಟ್ ಮಾಡಿರಲಿಲ್ಲ. ಬಿಡುವಿನ ಸಮಯದಲ್ಲಿ ಹೊಲಿಗೆ ಕಲಿತ ಹುಡುಗಿ, ಮಾಸ್ಕ್ ತಯಾರಿಸಿ ದೇಶದ ಗಮನ ಸೆಳೆದಿದ್ದಾಳೆ. ಹೌದು.. ಕೋವಿಡ್-19 ತಡೆಗಟ್ಟುವ ಸಲುವಾಗಿ ತನ್ನ ಕೈಯಾರೆ ತಯಾರಿಸಿದ 300 ಮಾಸ್ಕ್ಗಳನ್ನು ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಕಳುಹಿಸಿದ್ದ ಉಡುಪಿಯ ವಿದ್ಯಾರ್ಥಿನಿ ಈಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಗಮನ ಸೆಳೆದಿದ್ದಾಳೆ.
ಉಡುಪಿ ಅಂಬಲಪಾಡಿಯ ನಂದಿತಾ ಹಾಗೂ ಗಿರೀಶ್ ಆಚಾರ್ ದಂಪತಿಯ ಪುತ್ರಿ ಇಶಿತಾ ಆಚಾರ್(13) ಸಚಿವರ ಶ್ಲಾಘನೆಗೆ ಪಾತ್ರರಾಗಿರುವ ಬಾಲಕಿ. ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಇಶಿತಾ ರಕ್ಷಣಾ ಸಚಿವರ ಗಮನಸೆಳೆದ ಬಾಲಕಿ.

ಸ್ಕೌಟ್ಸ್ ಆ್ಯಂಡ್ ಗೈಡ್ಸ್ನಲ್ಲಿ ತೊಡಗಿಸಿಕೊಂಡಿರುವ ಇಶಿತಾ, ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಹೊಲಿಗೆಯನ್ನು ಕಲಿತುಕೊಂಡಿದ್ದಳು. ಬಿಡುವಿನ ವೇಳೆ ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನೀಡಲೆಂದು 300 ಮಾಸ್ಕ್ ಗಳನ್ನು ಹೊಲಿದು ರೆಡಿ ಮಾಡಿದ್ದರು.
ಹೀಗೆ ಮಕ್ಕಳು ಹೊಲಿದ ಮಾಸ್ಕ್ಗಳನ್ನು ನೇರವಾಗಿ ವಿದ್ಯಾರ್ಥಿಗಳಿಗೆ ನೀಡುವಂತಿಲ್ಲ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಾಸ್ಕ್ ಬ್ಯಾಂಕ್ಗೆ ನೀಡಬೇಕಾಗುತ್ತದೆ. ಆದರೆ ಆಗಲೇ ಮಾಸ್ಕ್ ಬ್ಯಾಂಕ್ನಲ್ಲಿ ಬಹಳಷ್ಟು ಮಾಸ್ಕ್ಗಳು ಬಂದು ಸೇರಿದ್ದವು. ಹೀಗಾಗಿ, ಇಶಿತಾ ತನ್ನಲ್ಲಿದ್ದ ಮಾಸ್ಕ್ಗಳನ್ನು ಅಗತ್ಯವುಳ್ಳ ಬೇರೆಯವರಿಗೆ ನೀಡಲು ಮುಂದಾದರು. ಇದೇ ವೇಳೆ, ತನ್ನ ತಾಯಿಯ ಸ್ನೇಹಿತರೊಬ್ಬರು ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಮಾಸ್ಕ್ ಕಳುಹಿಸಿಕೊಡಲು ಸಲಹೆ ಮಾಡಿದ್ದರು. ಅದರಂತೆ, ಇಶಿತಾ ಸುಮಾರು 300 ಮಾಸ್ಕ್ಗಳನ್ನು ರಕ್ಷಣಾ ಸಚಿವರ ಕಚೇರಿ ವಿಳಾಸಕ್ಕೆ ಕೊರಿಯರ್ ಮೂಲಕ ಕಳುಹಿಸಿದ್ದರು. ಬಾಲಕಿ ತೋರಿದ ದೇಶಪ್ರೇಮ ಹಾಗೂ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಇದೀಗ ತಿಂಗಳ ಬಳಿಕ ಕೇಂದ್ರ ರಕ್ಷಣಾ ಸಚಿವರ ಕಚೇರಿಯಿಂದ ಬಾಲಕಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿರುವ ಪತ್ರ ತಲುಪಿದ್ದು ವಿದ್ಯಾರ್ಥಿನಿ ಖುಷಿಯಾಗಿದ್ದಾಳೆ.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm