ರಾತ್ರಿ ಭದ್ರತೆ ; ಕರ್ತವ್ಯದಲ್ಲಿದ್ದಾಗಲೇ ತಲೆಗೆ ಗುಂಡು ಹಾರಿಸಿಕೊಂಡು ಪೊಲೀಸ್ ಸಿಬಂದಿ ಆತ್ಮಹತ್ಯೆ

29-04-22 09:41 pm       Udupi Correspondnt   ಕರಾವಳಿ

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬಂದಿ ರಾಜೇಶ್ ಕುಂದರ್ ಕರ್ತವ್ಯದಲ್ಲಿದ್ದಾಗಲೇ ತಮ್ಮ ಸರ್ವಿಸ್ ರಿವಾಲ್ವರ್ ನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ, ಎ.29: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬಂದಿ ರಾಜೇಶ್ ಕುಂದರ್ ಕರ್ತವ್ಯದಲ್ಲಿದ್ದಾಗಲೇ ತಮ್ಮ ಸರ್ವಿಸ್ ರಿವಾಲ್ವರ್ ನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಘಟನೆ ಉಡುಪಿಯಲ್ಲಿ ನಡೆದಿದೆ.

ರಾಜೇಶ್ ಕುಂದರ್ ಆದಿ ಉಡುಪಿಯ ಶಾಲೆಯೊಂದರಲ್ಲಿ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆಯನ್ನು ಇಟ್ಟಿದ್ದ ಕೊಠಡಿಗೆ ರಾತ್ರಿ ಭದ್ರತೆಗೆ ನಿಯೋಜನೆಗೊಂಡಿದ್ದರು. ಶುಕ್ರವಾರ ಬೆಳಗ್ಗೆ ಬದಲಿ ಸಿಬಂದಿ ಅವರ ಜಾಗಕ್ಕೆ ಆಗಮಿಸಿದಾಗ, ರಾಜೇಶ್ ಕುಂದರ್ ತಲೆಗೆ ಗುಂಡು ಹೊಡೆದುಕೊಂಡು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕುಟುಂಬಸ್ಥರ ದೂರಿನಂತೆ ಪ್ರಕರಣ ದಾಖಲಾಗಿದ್ದು, ಕೃತ್ಯಕ್ಕೆ ಸಂಬಂಧಿಸಿ ಸರ್ವಿಸ್ ರಿವಾಲ್ವರ್ ವಶಕ್ಕೆ ಪಡೆದಿದ್ದೇವೆ ಎಂದು ಎಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ಮಾಧ್ಯಮಕ್ಕೆ ತಿಳಿಸಿದ್ದಾರೆ. ಪ್ರಕರಣ ಒಂದಕ್ಕೆ ಸಂಬಂಧಿಸಿ ರಾಜೇಶ್ ಕುಂದರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿತ್ತು. ಅಮಾನತು ಅವಧಿ ಮುಗಿಸಿದ ಬಳಿಕ ಗುರುವಾರ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕುಟುಂಬದಲ್ಲಿ ಅಥವಾ ಕರ್ತವ್ಯದಲ್ಲಿ ಕಿರುಕುಳ ಆಗಿತ್ತೇ ಎನ್ನುವ ಬಗ್ಗೆ ತನಿಖೆಯಿಂದ ತಿಳಿದುಬರಬೇಕು.

Udupi Head constable Rajesh Kunder shoots himself with the service weapon on duty. Disclosing this to the media persons on Friday, April 29, assistant superintendent of police S T Siddalingappa said, "Deceased Rajesh was a head constable in the District Armed Reserve Police. He was on night duty outside the SSLC examination question paper store room at the high school in Adi Udupi. When other personnel arrived on the morning of Friday to relieve him they found him dead.