ಬ್ರೇಕಿಂಗ್ ನ್ಯೂಸ್
30-04-22 03:24 pm Mangalore Correspondent ಕರಾವಳಿ
ಮಂಗಳೂರು, ಎ.30: ಇನ್ನೊಂದು ಬೈಕನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ರಸ್ತೆಗೆ ಬಿದ್ದಿದ್ದು ಆತನ ಮೇಲಿನಿಂದಲೇ ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಸೆಬಾಲ್ಟನ್ ಜಾನ್(21) ಮೃತ ಯುವಕ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಹೊಟೇಲ್ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ. ಜಾನ್ ಬೈಕಿನಲ್ಲಿ ನಂತೂರು ಸರ್ಕಲ್ ದಾಟಿ ಮುಂದೆ ಹೋಗುತ್ತಿದ್ದಾಗ ಬುಲೆಟ್ ಬೈಕನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಎರಡು ಬೈಕುಗಳ ಧಾವಂತದಲ್ಲಿ ಜಾನ್ ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಬುಲೆಟ್ ಬೈಕಿಗೆ ತಾಗಿ ನೆಲಕ್ಕುರುಳಿದ್ದು ಅದರಲ್ಲಿದ್ದ ಜಾನ್ ರಸ್ತೆಗೆ ಬೀಳುತ್ತಲೇ ಪಕ್ಕದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.
ಎರಡೂ ಬೈಕುಗಳು ನೆಲಕ್ಕೆ ಬಿದ್ದಿದ್ದು ಬುಲೆಟ್ ಬೈಕ್ ಸವಾರನಿಗೂ ರಸ್ತೆಗೆ ಬಿದ್ದು ಗಾಯಗಳಾಗಿವೆ. ಆದರೆ ಆತ ಹೆಲ್ಮೆಟ್ ಹಾಕಿದ್ದರಿಂದ ಹೆಚ್ಚೇನೂ ಅಪಾಯ ಆಗಿಲ್ಲ. ಪಲ್ಸರ್ ಬೈಕಿನಲ್ಲಿದ್ದವರು ಹೆಲ್ಮೆಟ್ ಹಾಕ್ಕೊಂಡಿರಲಿಲ್ಲ. ಜಾನ್ ತನ್ನ ಹೆಲ್ಮೆಟನ್ನು ಕೈಗೆ ಸಿಕ್ಕಿಸಿಕೊಂಡಿದ್ದ. ರಸ್ತೆಗೆ ಬಿದ್ದ ಯುವಕನ ತಲೆಯ ಭಾಗದಿಂದಲೇ ಟ್ಯಾಂಕರ್ ಲಾರಿಯ ಮುಂದಿನ ಚಕ್ರ ಹರಿದಿದೆ ಎಂದು ಕದ್ರಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಜಾನ್ ಹಿಂಬದಿ ಕುಳಿತಿದ್ದ ಅಂಥೋನಿ ಎಂಬಾತನಿಗೂ ಅಪಘಾತದಲ್ಲಿ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏಕಮುಖದ ರಸ್ತೆಯಲ್ಲಿ ಎರಡು ಬೈಕುಗಳ ಅತಿವೇಗದ ಚಾಲನೆಯಿಂದಲೇ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore accident 21 year college student dies on spot after tanker truck goes on him at Nantoor. The deceased has been ide identified as John. He was pursing his hotel management course in Mangalore.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm