ಬ್ರೇಕಿಂಗ್ ನ್ಯೂಸ್
30-04-22 03:24 pm Mangalore Correspondent ಕರಾವಳಿ
ಮಂಗಳೂರು, ಎ.30: ಇನ್ನೊಂದು ಬೈಕನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ರಸ್ತೆಗೆ ಬಿದ್ದಿದ್ದು ಆತನ ಮೇಲಿನಿಂದಲೇ ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಸೆಬಾಲ್ಟನ್ ಜಾನ್(21) ಮೃತ ಯುವಕ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಹೊಟೇಲ್ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ. ಜಾನ್ ಬೈಕಿನಲ್ಲಿ ನಂತೂರು ಸರ್ಕಲ್ ದಾಟಿ ಮುಂದೆ ಹೋಗುತ್ತಿದ್ದಾಗ ಬುಲೆಟ್ ಬೈಕನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಎರಡು ಬೈಕುಗಳ ಧಾವಂತದಲ್ಲಿ ಜಾನ್ ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಬುಲೆಟ್ ಬೈಕಿಗೆ ತಾಗಿ ನೆಲಕ್ಕುರುಳಿದ್ದು ಅದರಲ್ಲಿದ್ದ ಜಾನ್ ರಸ್ತೆಗೆ ಬೀಳುತ್ತಲೇ ಪಕ್ಕದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.
ಎರಡೂ ಬೈಕುಗಳು ನೆಲಕ್ಕೆ ಬಿದ್ದಿದ್ದು ಬುಲೆಟ್ ಬೈಕ್ ಸವಾರನಿಗೂ ರಸ್ತೆಗೆ ಬಿದ್ದು ಗಾಯಗಳಾಗಿವೆ. ಆದರೆ ಆತ ಹೆಲ್ಮೆಟ್ ಹಾಕಿದ್ದರಿಂದ ಹೆಚ್ಚೇನೂ ಅಪಾಯ ಆಗಿಲ್ಲ. ಪಲ್ಸರ್ ಬೈಕಿನಲ್ಲಿದ್ದವರು ಹೆಲ್ಮೆಟ್ ಹಾಕ್ಕೊಂಡಿರಲಿಲ್ಲ. ಜಾನ್ ತನ್ನ ಹೆಲ್ಮೆಟನ್ನು ಕೈಗೆ ಸಿಕ್ಕಿಸಿಕೊಂಡಿದ್ದ. ರಸ್ತೆಗೆ ಬಿದ್ದ ಯುವಕನ ತಲೆಯ ಭಾಗದಿಂದಲೇ ಟ್ಯಾಂಕರ್ ಲಾರಿಯ ಮುಂದಿನ ಚಕ್ರ ಹರಿದಿದೆ ಎಂದು ಕದ್ರಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಜಾನ್ ಹಿಂಬದಿ ಕುಳಿತಿದ್ದ ಅಂಥೋನಿ ಎಂಬಾತನಿಗೂ ಅಪಘಾತದಲ್ಲಿ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏಕಮುಖದ ರಸ್ತೆಯಲ್ಲಿ ಎರಡು ಬೈಕುಗಳ ಅತಿವೇಗದ ಚಾಲನೆಯಿಂದಲೇ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore accident 21 year college student dies on spot after tanker truck goes on him at Nantoor. The deceased has been ide identified as John. He was pursing his hotel management course in Mangalore.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm