ಬ್ರೇಕಿಂಗ್ ನ್ಯೂಸ್
30-04-22 03:24 pm Mangalore Correspondent ಕರಾವಳಿ
ಮಂಗಳೂರು, ಎ.30: ಇನ್ನೊಂದು ಬೈಕನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ರಸ್ತೆಗೆ ಬಿದ್ದಿದ್ದು ಆತನ ಮೇಲಿನಿಂದಲೇ ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಸೆಬಾಲ್ಟನ್ ಜಾನ್(21) ಮೃತ ಯುವಕ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಹೊಟೇಲ್ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ. ಜಾನ್ ಬೈಕಿನಲ್ಲಿ ನಂತೂರು ಸರ್ಕಲ್ ದಾಟಿ ಮುಂದೆ ಹೋಗುತ್ತಿದ್ದಾಗ ಬುಲೆಟ್ ಬೈಕನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಎರಡು ಬೈಕುಗಳ ಧಾವಂತದಲ್ಲಿ ಜಾನ್ ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಬುಲೆಟ್ ಬೈಕಿಗೆ ತಾಗಿ ನೆಲಕ್ಕುರುಳಿದ್ದು ಅದರಲ್ಲಿದ್ದ ಜಾನ್ ರಸ್ತೆಗೆ ಬೀಳುತ್ತಲೇ ಪಕ್ಕದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.

ಎರಡೂ ಬೈಕುಗಳು ನೆಲಕ್ಕೆ ಬಿದ್ದಿದ್ದು ಬುಲೆಟ್ ಬೈಕ್ ಸವಾರನಿಗೂ ರಸ್ತೆಗೆ ಬಿದ್ದು ಗಾಯಗಳಾಗಿವೆ. ಆದರೆ ಆತ ಹೆಲ್ಮೆಟ್ ಹಾಕಿದ್ದರಿಂದ ಹೆಚ್ಚೇನೂ ಅಪಾಯ ಆಗಿಲ್ಲ. ಪಲ್ಸರ್ ಬೈಕಿನಲ್ಲಿದ್ದವರು ಹೆಲ್ಮೆಟ್ ಹಾಕ್ಕೊಂಡಿರಲಿಲ್ಲ. ಜಾನ್ ತನ್ನ ಹೆಲ್ಮೆಟನ್ನು ಕೈಗೆ ಸಿಕ್ಕಿಸಿಕೊಂಡಿದ್ದ. ರಸ್ತೆಗೆ ಬಿದ್ದ ಯುವಕನ ತಲೆಯ ಭಾಗದಿಂದಲೇ ಟ್ಯಾಂಕರ್ ಲಾರಿಯ ಮುಂದಿನ ಚಕ್ರ ಹರಿದಿದೆ ಎಂದು ಕದ್ರಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಜಾನ್ ಹಿಂಬದಿ ಕುಳಿತಿದ್ದ ಅಂಥೋನಿ ಎಂಬಾತನಿಗೂ ಅಪಘಾತದಲ್ಲಿ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏಕಮುಖದ ರಸ್ತೆಯಲ್ಲಿ ಎರಡು ಬೈಕುಗಳ ಅತಿವೇಗದ ಚಾಲನೆಯಿಂದಲೇ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore accident 21 year college student dies on spot after tanker truck goes on him at Nantoor. The deceased has been ide identified as John. He was pursing his hotel management course in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm