ಬ್ರೇಕಿಂಗ್ ನ್ಯೂಸ್
30-04-22 03:24 pm Mangalore Correspondent ಕರಾವಳಿ
ಮಂಗಳೂರು, ಎ.30: ಇನ್ನೊಂದು ಬೈಕನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ರಸ್ತೆಗೆ ಬಿದ್ದಿದ್ದು ಆತನ ಮೇಲಿನಿಂದಲೇ ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಸೆಬಾಲ್ಟನ್ ಜಾನ್(21) ಮೃತ ಯುವಕ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಹೊಟೇಲ್ ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿದ್ದ. ಜಾನ್ ಬೈಕಿನಲ್ಲಿ ನಂತೂರು ಸರ್ಕಲ್ ದಾಟಿ ಮುಂದೆ ಹೋಗುತ್ತಿದ್ದಾಗ ಬುಲೆಟ್ ಬೈಕನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಎರಡು ಬೈಕುಗಳ ಧಾವಂತದಲ್ಲಿ ಜಾನ್ ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಬುಲೆಟ್ ಬೈಕಿಗೆ ತಾಗಿ ನೆಲಕ್ಕುರುಳಿದ್ದು ಅದರಲ್ಲಿದ್ದ ಜಾನ್ ರಸ್ತೆಗೆ ಬೀಳುತ್ತಲೇ ಪಕ್ಕದಲ್ಲಿ ಸಾಗುತ್ತಿದ್ದ ಟ್ಯಾಂಕರ್ ಆತನ ಮೇಲೆ ಹರಿದು ಹೋಗಿದೆ.

ಎರಡೂ ಬೈಕುಗಳು ನೆಲಕ್ಕೆ ಬಿದ್ದಿದ್ದು ಬುಲೆಟ್ ಬೈಕ್ ಸವಾರನಿಗೂ ರಸ್ತೆಗೆ ಬಿದ್ದು ಗಾಯಗಳಾಗಿವೆ. ಆದರೆ ಆತ ಹೆಲ್ಮೆಟ್ ಹಾಕಿದ್ದರಿಂದ ಹೆಚ್ಚೇನೂ ಅಪಾಯ ಆಗಿಲ್ಲ. ಪಲ್ಸರ್ ಬೈಕಿನಲ್ಲಿದ್ದವರು ಹೆಲ್ಮೆಟ್ ಹಾಕ್ಕೊಂಡಿರಲಿಲ್ಲ. ಜಾನ್ ತನ್ನ ಹೆಲ್ಮೆಟನ್ನು ಕೈಗೆ ಸಿಕ್ಕಿಸಿಕೊಂಡಿದ್ದ. ರಸ್ತೆಗೆ ಬಿದ್ದ ಯುವಕನ ತಲೆಯ ಭಾಗದಿಂದಲೇ ಟ್ಯಾಂಕರ್ ಲಾರಿಯ ಮುಂದಿನ ಚಕ್ರ ಹರಿದಿದೆ ಎಂದು ಕದ್ರಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಜಾನ್ ಹಿಂಬದಿ ಕುಳಿತಿದ್ದ ಅಂಥೋನಿ ಎಂಬಾತನಿಗೂ ಅಪಘಾತದಲ್ಲಿ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏಕಮುಖದ ರಸ್ತೆಯಲ್ಲಿ ಎರಡು ಬೈಕುಗಳ ಅತಿವೇಗದ ಚಾಲನೆಯಿಂದಲೇ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore accident 21 year college student dies on spot after tanker truck goes on him at Nantoor. The deceased has been ide identified as John. He was pursing his hotel management course in Mangalore.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am