ಬ್ರೇಕಿಂಗ್ ನ್ಯೂಸ್
04-05-22 09:13 pm Mangalore Correspondent ಕರಾವಳಿ
ಬಂಟ್ವಾಳ, ಮೇ 4: ಮುಸ್ಲಿಂ ಯುವಕನ ಪ್ರೇಮ ಪಾಶಕ್ಕೆ ಬಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯವರು ಬೈದ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.
ಮೂಲತಃ ಸುಳ್ಯ ತಾಲೂಕಿನ ಪಂಜ ಮೂಲದ ಪರಿಶಿಷ್ಟ ವರ್ಗಕ್ಕೆ ಸೇರಿದ ಸಂಜೀವ ಎಂಬವರ ಕುಟುಂಬ ಕನ್ಯಾನ ಗ್ರಾಮದ ಕಣಿಯೂರಿನ ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಇಂದು ಬೆಳಗ್ಗೆ ತಂದೆ- ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ, ಮಗಳು 15 ವರ್ಷದ ಮಗಳು ಆತ್ಮಿಕಾ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಈ ಬಗ್ಗೆ ಸಂಜೀವ ವಿಟ್ಲ ಠಾಣೆಗೆ ನೀಡಿರುವ ದೂರಿನಲ್ಲಿ ಆಕೆಯ ಪ್ರೀತಿಯ ವಿಚಾರ ತಿಳಿಸಿದ್ದಾರೆ.
ಹತ್ತನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಎಂಬಾತ ಪ್ರೀತಿಸುತ್ತಿದ್ದು, ಮನೆ ಬಿಟ್ಟು ತನ್ನ ಜೊತೆ ಬರುವಂತೆ ಪೀಡಿಸುತ್ತಿದ್ದ. ಮನೆಯಲ್ಲಿ ತಂದೆ-ತಾಯಿ ಇಲ್ಲದ ವೇಳೆ ಬಂದು ತನ್ನನ್ನು ಪ್ರೀತಿಸುವಂತೆ ಮತ್ತು ತನ್ನ ಜೊತೆ ಮನೆಯವರನ್ನು ಬಿಟ್ಟು ಬರುಂತೆ ಒತ್ತಾಯ ಪಡಿಸಿದ್ದ. ಈ ಬಗ್ಗೆ ವಿಷಯ ತಿಳಿದ ಹೆತ್ತವರು ಮಗಳಿಗೆ ಬುದ್ಧಿ ಹೇಳಿದ್ದಲ್ಲದೆ, ಸಾಹುಲ್ ನನ್ನು ಪ್ರೀತಿಸದಂತೆ ತಡೆಯೊಡ್ದಿದ್ದರು. ಅದಕ್ಕೆ ನನ್ನ ಜೊತೆ ಬರದಿದ್ದರೆ, ಅಲ್ಲಿಯೇ ಸಾಯುವಂತೆ ಸಾಹುಲ್ ಹೇಳಿದ್ದಾಗಿ ಮಗಳು ಹೆತ್ತವರಲ್ಲಿ ಹೇಳಿದ್ದಳು. ಇದರಿಂದಾಗಿ ಆತನ ದುಷ್ಪ್ರೇರಣೆಯಿಂದ ಮಗಳು ಸಾವಿಗೆ ಶರಣಾಗಿದ್ದಾಳೆ ಎಂದು ತಂದೆ ದೂರಿದ್ದಾರೆ. ಇದರ ನಡುವೆ, ಸಾಹುಲ್ ಹಮೀದ್ ಮತ್ತು ಆತನ ಅಣ್ಣನನ್ನು ಕರೆದು ಸಂಜೀವ ಅವರು ಎಚ್ಚರಿಕೆಯನ್ನೂ ನೀಡಿದ್ದರು. ವಿಟ್ಲ ಪೊಲೀಸರು ಜಾತಿ ನಿಂದನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಎಂದು ಪ್ರಕರಣ ದಾಖಲಿಸಿದ್ದಾರೆ.
Mangalore Sslc girl commits suicide at her house as parents reject her love for Muslim boy at Vitla. She was said to be of 15 years old.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm