ಬ್ರೇಕಿಂಗ್ ನ್ಯೂಸ್
04-05-22 09:13 pm Mangalore Correspondent ಕರಾವಳಿ
ಬಂಟ್ವಾಳ, ಮೇ 4: ಮುಸ್ಲಿಂ ಯುವಕನ ಪ್ರೇಮ ಪಾಶಕ್ಕೆ ಬಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯವರು ಬೈದ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.
ಮೂಲತಃ ಸುಳ್ಯ ತಾಲೂಕಿನ ಪಂಜ ಮೂಲದ ಪರಿಶಿಷ್ಟ ವರ್ಗಕ್ಕೆ ಸೇರಿದ ಸಂಜೀವ ಎಂಬವರ ಕುಟುಂಬ ಕನ್ಯಾನ ಗ್ರಾಮದ ಕಣಿಯೂರಿನ ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಇಂದು ಬೆಳಗ್ಗೆ ತಂದೆ- ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ, ಮಗಳು 15 ವರ್ಷದ ಮಗಳು ಆತ್ಮಿಕಾ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಈ ಬಗ್ಗೆ ಸಂಜೀವ ವಿಟ್ಲ ಠಾಣೆಗೆ ನೀಡಿರುವ ದೂರಿನಲ್ಲಿ ಆಕೆಯ ಪ್ರೀತಿಯ ವಿಚಾರ ತಿಳಿಸಿದ್ದಾರೆ.
ಹತ್ತನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಎಂಬಾತ ಪ್ರೀತಿಸುತ್ತಿದ್ದು, ಮನೆ ಬಿಟ್ಟು ತನ್ನ ಜೊತೆ ಬರುವಂತೆ ಪೀಡಿಸುತ್ತಿದ್ದ. ಮನೆಯಲ್ಲಿ ತಂದೆ-ತಾಯಿ ಇಲ್ಲದ ವೇಳೆ ಬಂದು ತನ್ನನ್ನು ಪ್ರೀತಿಸುವಂತೆ ಮತ್ತು ತನ್ನ ಜೊತೆ ಮನೆಯವರನ್ನು ಬಿಟ್ಟು ಬರುಂತೆ ಒತ್ತಾಯ ಪಡಿಸಿದ್ದ. ಈ ಬಗ್ಗೆ ವಿಷಯ ತಿಳಿದ ಹೆತ್ತವರು ಮಗಳಿಗೆ ಬುದ್ಧಿ ಹೇಳಿದ್ದಲ್ಲದೆ, ಸಾಹುಲ್ ನನ್ನು ಪ್ರೀತಿಸದಂತೆ ತಡೆಯೊಡ್ದಿದ್ದರು. ಅದಕ್ಕೆ ನನ್ನ ಜೊತೆ ಬರದಿದ್ದರೆ, ಅಲ್ಲಿಯೇ ಸಾಯುವಂತೆ ಸಾಹುಲ್ ಹೇಳಿದ್ದಾಗಿ ಮಗಳು ಹೆತ್ತವರಲ್ಲಿ ಹೇಳಿದ್ದಳು. ಇದರಿಂದಾಗಿ ಆತನ ದುಷ್ಪ್ರೇರಣೆಯಿಂದ ಮಗಳು ಸಾವಿಗೆ ಶರಣಾಗಿದ್ದಾಳೆ ಎಂದು ತಂದೆ ದೂರಿದ್ದಾರೆ. ಇದರ ನಡುವೆ, ಸಾಹುಲ್ ಹಮೀದ್ ಮತ್ತು ಆತನ ಅಣ್ಣನನ್ನು ಕರೆದು ಸಂಜೀವ ಅವರು ಎಚ್ಚರಿಕೆಯನ್ನೂ ನೀಡಿದ್ದರು. ವಿಟ್ಲ ಪೊಲೀಸರು ಜಾತಿ ನಿಂದನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಎಂದು ಪ್ರಕರಣ ದಾಖಲಿಸಿದ್ದಾರೆ.
Mangalore Sslc girl commits suicide at her house as parents reject her love for Muslim boy at Vitla. She was said to be of 15 years old.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm