ನಿದ್ದೆ ಮಂಪರಿನಲ್ಲಿ ಡಿವೈಡರ್ ದಾಟಿದ ಕಾರಿಗೆ ಕಂಟೇನರ್ ಡಿಕ್ಕಿ ; ಚಾಲಕ ಸ್ಥಳದಲ್ಲೇ ಸಾವು

05-05-22 11:38 am       Mangalore Correspondent   ಕರಾವಳಿ

ನಿದ್ದೆ ಮಂಪರಿನಲ್ಲಿ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಡಿವೈಡರ್ ದಾಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಡೆದಿದೆ.

ಮಂಗಳೂರು, ಮೇ 5: ನಿದ್ದೆ ಮಂಪರಿನಲ್ಲಿ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಡಿವೈಡರ್ ದಾಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಡೆದಿದೆ.

ಮಂಜೇಶ್ವರದ ಕುಂಜತ್ತೂರು ನಿವಾಸಿ ಇಬ್ರಾಹಿಂ (32) ಮೃತರು. ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ರಾಹಿಂ ಮತ್ತು ಸ್ನೇಹಿತರು ಕಾರಿನಲ್ಲಿ ಮಂಗಳೂರು ಮೂಲಕ ಬಂಟ್ವಾಳಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಾಯಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ಇನ್ನೊಂದು ಬದಿಯ ರಸ್ತೆಗೆ ಹೋಗಿದ್ದು, ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಮುಖಾಮುಖ ಡಿಕ್ಕಿಯಾಗಿದೆ.

ನಸುಕಿನ ಜಾವ ಘಟನೆ ನಡೆದಿದ್ದು, ಚಾಲಕ ನಿದ್ದೆಯ ಮಂಪರಿನಲ್ಲಿ ಕಾರು ಚಲಾಯಿಸಿದ್ದರಿಂದ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mangalore Car rams truck from behind crossing divider at Kannur, one dead two injured. The deceased has been identified as Ibrahim (32).