ಬ್ರೇಕಿಂಗ್ ನ್ಯೂಸ್
07-05-22 05:18 pm Mangalore Correspondent ಕರಾವಳಿ
ಬಂಟ್ವಾಳ, ಮೇ 7: ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ನನ್ನು ವಿಟ್ಲ ಪೊಲೀಸರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನೆಗೆ ಸಾಹುಲ್ ಹಮೀದ್ ಎಂಬಾತ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.

ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿ ಅಡಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 4ರಂದು ಕಣಿಯೂರು ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೂಲಿ ಕಾರ್ಮಿಕ ಸಂಜೀವ ಎಂಬವರ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಮಗಳ ಸಾವಿಗೆ ಕಣಿಯೂರು ತಲೆಕ್ಕಿಯ ಸಾಹುಲ್ ಹಮೀದ್ ಯಾನೆ ಕುಟ್ಟ ಪ್ರಚೋದನೆ ನೀಡಿರುವುದೇ ಕಾರಣ ಎಂದು ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದರು.
ಘಟನೆಯ ಬಳಿಕ ಹಿಂದು ಸಂಘಟನೆಗಳು ಮೃತ ಬಾಲಕಿ ಮನೆಗೆ ಭೇಟಿ ನೀಡಿ ಇದೊಂದು ವ್ಯವಸ್ಥಿತ ಹತ್ಯೆ, ಲವ್ ಜಿಹಾದಿಗೆ ಬಾಲಕಿ ಬಲಿಯಾಗಿದ್ದಾಳೆಂದು ಆರೋಪಿಸಿದ್ದರು. ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ನಿಯೋಗ ಭೇಟಿ ಮಾಡಿತ್ತು. ಶುಕ್ರವಾರ ಬೆಳಗ್ಗೆ ಶಾಸಕ ರಾಜೇಶ್ ನಾಯ್ಕ್ ಮತ್ತು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮೃತ ಬಾಲಕಿ ಮನೆಗೆ ಭೇಟಿ ನೀಡಿದ್ದರು.
Bantwal Provocation to suicide of 15 year old girl accused arrested.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am