ಬ್ರೇಕಿಂಗ್ ನ್ಯೂಸ್
07-05-22 05:18 pm Mangalore Correspondent ಕರಾವಳಿ
ಬಂಟ್ವಾಳ, ಮೇ 7: ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ನನ್ನು ವಿಟ್ಲ ಪೊಲೀಸರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನೆಗೆ ಸಾಹುಲ್ ಹಮೀದ್ ಎಂಬಾತ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.

ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿ ಅಡಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 4ರಂದು ಕಣಿಯೂರು ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೂಲಿ ಕಾರ್ಮಿಕ ಸಂಜೀವ ಎಂಬವರ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಮಗಳ ಸಾವಿಗೆ ಕಣಿಯೂರು ತಲೆಕ್ಕಿಯ ಸಾಹುಲ್ ಹಮೀದ್ ಯಾನೆ ಕುಟ್ಟ ಪ್ರಚೋದನೆ ನೀಡಿರುವುದೇ ಕಾರಣ ಎಂದು ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದರು.
ಘಟನೆಯ ಬಳಿಕ ಹಿಂದು ಸಂಘಟನೆಗಳು ಮೃತ ಬಾಲಕಿ ಮನೆಗೆ ಭೇಟಿ ನೀಡಿ ಇದೊಂದು ವ್ಯವಸ್ಥಿತ ಹತ್ಯೆ, ಲವ್ ಜಿಹಾದಿಗೆ ಬಾಲಕಿ ಬಲಿಯಾಗಿದ್ದಾಳೆಂದು ಆರೋಪಿಸಿದ್ದರು. ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ನಿಯೋಗ ಭೇಟಿ ಮಾಡಿತ್ತು. ಶುಕ್ರವಾರ ಬೆಳಗ್ಗೆ ಶಾಸಕ ರಾಜೇಶ್ ನಾಯ್ಕ್ ಮತ್ತು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮೃತ ಬಾಲಕಿ ಮನೆಗೆ ಭೇಟಿ ನೀಡಿದ್ದರು.
Bantwal Provocation to suicide of 15 year old girl accused arrested.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm