ಬ್ರೇಕಿಂಗ್ ನ್ಯೂಸ್
07-05-22 05:18 pm Mangalore Correspondent ಕರಾವಳಿ
ಬಂಟ್ವಾಳ, ಮೇ 7: ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಸಾಲೆತ್ತೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ನನ್ನು ವಿಟ್ಲ ಪೊಲೀಸರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನೆಗೆ ಸಾಹುಲ್ ಹಮೀದ್ ಎಂಬಾತ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ಎರಡು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿ ಅಡಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 4ರಂದು ಕಣಿಯೂರು ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೂಲಿ ಕಾರ್ಮಿಕ ಸಂಜೀವ ಎಂಬವರ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಮಗಳ ಸಾವಿಗೆ ಕಣಿಯೂರು ತಲೆಕ್ಕಿಯ ಸಾಹುಲ್ ಹಮೀದ್ ಯಾನೆ ಕುಟ್ಟ ಪ್ರಚೋದನೆ ನೀಡಿರುವುದೇ ಕಾರಣ ಎಂದು ಆರೋಪಿಸಿ ಬಾಲಕಿಯ ತಂದೆ ದೂರು ನೀಡಿದ್ದರು.
ಘಟನೆಯ ಬಳಿಕ ಹಿಂದು ಸಂಘಟನೆಗಳು ಮೃತ ಬಾಲಕಿ ಮನೆಗೆ ಭೇಟಿ ನೀಡಿ ಇದೊಂದು ವ್ಯವಸ್ಥಿತ ಹತ್ಯೆ, ಲವ್ ಜಿಹಾದಿಗೆ ಬಾಲಕಿ ಬಲಿಯಾಗಿದ್ದಾಳೆಂದು ಆರೋಪಿಸಿದ್ದರು. ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ನಿಯೋಗ ಭೇಟಿ ಮಾಡಿತ್ತು. ಶುಕ್ರವಾರ ಬೆಳಗ್ಗೆ ಶಾಸಕ ರಾಜೇಶ್ ನಾಯ್ಕ್ ಮತ್ತು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮೃತ ಬಾಲಕಿ ಮನೆಗೆ ಭೇಟಿ ನೀಡಿದ್ದರು.
Bantwal Provocation to suicide of 15 year old girl accused arrested.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm