ಬ್ರೇಕಿಂಗ್ ನ್ಯೂಸ್
25-09-20 06:19 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 25: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವಂತೆ ನೋಟೀಸ್ ಪಡೆದಿದ್ದ ನಿರೂಪಕಿ ಅನುಶ್ರೀ ಇಂದೇ ವಿಚಾರಣೆಗೆ ಹಾಜರಾಗ್ತೀನಿ ಎಂದು ಹೇಳಿ ಮಂಗಳೂರಿನಲ್ಲಿ ಕಣ್ಣು ಮುಚ್ಚಾಲೆ ಆಡಿಸಿದ್ದಾಳೆ. ಪೊಲೀಸರು ಮತ್ತು ಮಾಧ್ಯಮ ಮಂದಿಯನ್ನು ಇಡೀ ದಿನ ತುದಿಗಾಲಲ್ಲಿ ನಿಲ್ಲುವಂತೆ ಮಾಡಿ ಯಾಮಾರಿಸಿದ್ದಾಳೆ.
ಅನುಶ್ರೀಗೆ ಮಂಗಳೂರು ಪೊಲೀಸರು ನಿನ್ನೆಯಷ್ಟೇ ವಿಚಾರಣೆಗೆ ಬರುವಂತೆ ನೋಟೀಸ್ ನೀಡಿದ್ದರು. ಈ ಬಗ್ಗೆ ರಾತ್ರಿ ವೇಳೆಗೆ ನೋಟೀಸ್ ಸಿಕ್ಕಿರುವುದನ್ನು ದೃಢಪಡಿಸಿದ ಅನುಶ್ರೀ, ಮಾಧ್ಯಮಗಳಲ್ಲಿ ನಾಳೆಯೇ(ಶುಕ್ರವಾರ) ಮಂಗಳೂರಿಗೆ ಹೋಗ್ತೀನಿ. ಬೆಳಗ್ಗೆ 11 ಗಂಟೆಗೆ ಪೊಲೀಸರ ವಿಚಾರಣೆಗೆ ಹಾಜರಾಗ್ತೀನಿ ಎಂದಿದ್ದಳು. ಅದಲ್ಲದೆ, ಆ ಬಗ್ಗೆ ಒಂದು ಸುದೀರ್ಘ ಪತ್ರಿಕಾ ಹೇಳಿಕೆಯನ್ನೂ ನೀಡಿದ್ದಳು.
ಹೀಗಾಗಿ ಅನುಶ್ರೀ ಇಂದು ಬೆಳಗ್ಗೆ ಮಂಗಳೂರು ಕಮಿಷನರ್ ಕಚೇರಿಗೆ ಅಥವಾ ಎನ್ ಸಿಐಬಿ ಕಚೇರಿಗೆ ಬರಬಹುದು ಅಂದ್ಕೊಂಡಿದ್ದ ಪೊಲೀಸರು ಮತ್ತು ಮೀಡಿಯಾ ಮಂದಿ ಬೆಳಗ್ಗಿನಿಂದ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಕಾದಿದ್ದೇ ಬಂತು. ಸಂಜೆವರೆಗೂ ಅನುಶ್ರೀ ಅತ್ತ ಸುಳಿಯಲೇ ಇಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಬಳಿ ಪ್ರಶ್ನಿಸಿದರೆ ಉತ್ತರಾನೇ ಇಲ್ಲ. ಹೀಗಾಗಿ ಅನುಶ್ರೀ ಶನಿವಾರ ಮಂಗಳೂರಿನ ಪೊಲೀಸರ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಪೊಲೀಸರು ನೀಡಿದ್ದ ನೋಟೀಸ್ ನಲ್ಲಿ ಶನಿವಾರದ ಒಳಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ, ಅನುಶ್ರೀ ನಿನ್ನೆ ರಾತ್ರಿ ಪತ್ರಿಕಾ ಹೇಳಿಕೆ ನೀಡಿ ಶುಕ್ರವಾರವೇ ವಿಚಾರಣೆಗೆ ಬರ್ತೀನಿ.. ನಾನು ಯಾವುದೇ ತಪ್ಪು ಮಾಡಿಲ್ಲ. ನನಗೂ ಅವರಿಗೂ ಸಂಬಂಧಾನೇ ಇಲ್ಲ ಎಂದು ಬಡಾಯಿ ಬಿಟ್ಟಿದ್ದರು. ಹೀಗಾಗಿ ಇಂದು ಬೆಳಗ್ಗೆ ಅನುಶ್ರೀ ಬರುವಿಕೆ ಖಚಿತ ಎನ್ನಲಾಗಿತ್ತು. ಆದರೆ, ಸಂಜೆವರೆಗೂ ಕಾದ ಪೊಲೀಸರು ಮತ್ತು ಮಾಧ್ಯಮದ ಮಂದಿಗೆ ಅನುಶ್ರೀ ಕಾಣಸಿಗಲೇ ಇಲ್ಲ. ಎಲ್ಲಿದ್ದಾಳೆ, ಇಂದು ರಾತ್ರಿ ಬರಬಹುದಾ ಅಥವಾ ನಾಳೆ ಬರಬಹುದಾ ಅನ್ನೋದ್ರ ಬಗ್ಗೆನೂ ಖಚಿತತೆ ಇಲ್ಲ. ಬಂಧಿತ ಡ್ಯಾನ್ಸರ್ ಕಿಶೋರ್ ಆಪ್ತ ತರುಣ್ ಹೇಳಿಕೆ ಆಧರಿಸಿ, ಅನುಶ್ರೀಗೆ ನೋಟಿಸ್ ನೀಡಲಾಗಿತ್ತು.
ಮಂಗಳೂರಿನಲ್ಲಿ ಪಾರ್ಟಿ ಮಾಡಿಲ್ಲವಂತೆ !
ಇನ್ನು ಎನ್ ಸಿಬಿ ಅಧಿಕಾರಿಗಳ ಮಾಹಿತಿ ಪ್ರಕಾರ, ಕಿಶೋರ್ ಆಪ್ತ ತರುಣ್ ಗೆ ಅನುಶ್ರೀ ಜೊತೆ ಹತ್ತಿರದ ಸಂಬಂಧ ಇತ್ತಂತೆ. ಬೆಂಗಳೂರಿನಲ್ಲಿ ಜೊತೆಗೆ ಪಾರ್ಟಿ ಮಾಡಿದ್ದೂ ಇದೆಯಂತೆ. ಇನ್ನು ಮಂಗಳೂರಿನಲ್ಲಿ ಪಾರ್ಟಿ ಮಾಡಿದ್ದಾರೆ ಎನ್ನುವುದನ್ನು ಯಾರು ಕೂಡ ಹೇಳಿಲ್ಲ. ತರುಣ್, ಈ ಹಿಂದೆ ಕೊರಿಯೋಗ್ರಾಫರ್ ಆಗಿದ್ದರಿಂದ ಆಕೆ ಕರೆದಿದ್ದ ಪಾರ್ಟಿಗೆ ಹೋಗಿದ್ದ ಎಂದು ತಿಳಿಸಿದ್ದಾರೆ. ಕೆಲವು ಮಾಹಿತಿಗಳ ಸಂಗ್ರಹಕ್ಕಾಗಿ ಅನುಶ್ರೀಗೆ ನೋಟೀಸ್ ನೀಡಿದ್ದೇವೆ ಅಷ್ಟೇ ಎಂದಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm