ಬ್ರೇಕಿಂಗ್ ನ್ಯೂಸ್
12-05-22 12:59 pm Mangalore Correspondent ಕರಾವಳಿ
ಮಂಗಳೂರು, ಮೇ 12 : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಆಂತರಿಕ ಕಲಹದ ಕಾರಣ ಆಹಾರ ಕೊರತೆ ಉಂಟಾಗಿರುವುದರಿಂದ ಅಲ್ಲಿನ ಜನರು ಸಮುದ್ರ ಮಾರ್ಗದ ಮೂಲಕ ಭಾರತದತ್ತ ಬರುವ ಸಾಧ್ಯತೆಗಳಿದ್ದು ಕರಾವಳಿ ತೀರ ಪ್ರದೇಶದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್ ಪಡೆಯವರು ಸೂಚನೆ ನೀಡಿದ್ದಾರೆ.
ಶ್ರೀಲಂಕಾದಲ್ಲಿ ಆಂತರಿಕ ಕಲಹ, ದೊಂಬಿಯ ಕಾರಣದಿಂದಾಗಿ ಜನರು ತತ್ತರಿಸಿದ್ದು ಸಮುದ್ರ ಮಾರ್ಗ ಅಥವಾ ಇನ್ನಿತರ ಮಾರ್ಗದ ಮೂಲಕ ಭಾರತಕ್ಕೆ ಆಗಮಿಸಿ, ಇಲ್ಲಿನ ಕರಾವಳಿ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ ಪೂರ್ವಾಪರ ವಿಚಾರಿಸಬೇಕು. ಸೂಕ್ತ ದಾಖಲಾತಿಗಳನ್ನು ಪಡೆದು ಪರಿಶೀಲನೆ ನಡೆಸಬೇಕು. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಲಂಕನ್ನರು ಅಕ್ರಮವಾಗಿ ಒಳನುಸುಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಕರಾವಳಿ ಕಾವಲು ಪೊಲೀಸ್ ಪಡೆಯ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಹೆಚ್ಚಾಗಿ ನೆಲೆಸಿರುವ ಮೀನುಗಾರರಿಗೆ, ಮೀನುಗಾರಿಕಾ ಸಂಘಗಳಿಗೆ, ಹೊಟೇಲು, ಲಾಡ್ಜ್ ಗಳಿಗೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ರವಾನಿಸಲಾಗಿದೆ. ಒಂದು ವರ್ಷದ ಹಿಂದೆ ತಮಿಳುನಾಡು ಮೂಲಕ ಒಳನುಸುಳಿದ್ದ ಲಂಕಾ ಮೂಲದ 38 ಮಂದಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಮುಂಜಾಗ್ರತೆ ವಹಿಸಲು ಸಾರ್ವಜನಿಕರಿಗೆ ಕೋರಿದ್ದಾರೆ.
Mangalore Sri Lanka Economic Crisis, the possibility of Lankans entering India via sea, police warn house owners to be careful if strangers are found asking house for rent. The police department has asked to check the documents.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm