ಬ್ರೇಕಿಂಗ್ ನ್ಯೂಸ್
12-05-22 12:59 pm Mangalore Correspondent ಕರಾವಳಿ
ಮಂಗಳೂರು, ಮೇ 12 : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಆಂತರಿಕ ಕಲಹದ ಕಾರಣ ಆಹಾರ ಕೊರತೆ ಉಂಟಾಗಿರುವುದರಿಂದ ಅಲ್ಲಿನ ಜನರು ಸಮುದ್ರ ಮಾರ್ಗದ ಮೂಲಕ ಭಾರತದತ್ತ ಬರುವ ಸಾಧ್ಯತೆಗಳಿದ್ದು ಕರಾವಳಿ ತೀರ ಪ್ರದೇಶದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್ ಪಡೆಯವರು ಸೂಚನೆ ನೀಡಿದ್ದಾರೆ.
ಶ್ರೀಲಂಕಾದಲ್ಲಿ ಆಂತರಿಕ ಕಲಹ, ದೊಂಬಿಯ ಕಾರಣದಿಂದಾಗಿ ಜನರು ತತ್ತರಿಸಿದ್ದು ಸಮುದ್ರ ಮಾರ್ಗ ಅಥವಾ ಇನ್ನಿತರ ಮಾರ್ಗದ ಮೂಲಕ ಭಾರತಕ್ಕೆ ಆಗಮಿಸಿ, ಇಲ್ಲಿನ ಕರಾವಳಿ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ ಪೂರ್ವಾಪರ ವಿಚಾರಿಸಬೇಕು. ಸೂಕ್ತ ದಾಖಲಾತಿಗಳನ್ನು ಪಡೆದು ಪರಿಶೀಲನೆ ನಡೆಸಬೇಕು. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಲಂಕನ್ನರು ಅಕ್ರಮವಾಗಿ ಒಳನುಸುಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಕರಾವಳಿ ಕಾವಲು ಪೊಲೀಸ್ ಪಡೆಯ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಹೆಚ್ಚಾಗಿ ನೆಲೆಸಿರುವ ಮೀನುಗಾರರಿಗೆ, ಮೀನುಗಾರಿಕಾ ಸಂಘಗಳಿಗೆ, ಹೊಟೇಲು, ಲಾಡ್ಜ್ ಗಳಿಗೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ರವಾನಿಸಲಾಗಿದೆ. ಒಂದು ವರ್ಷದ ಹಿಂದೆ ತಮಿಳುನಾಡು ಮೂಲಕ ಒಳನುಸುಳಿದ್ದ ಲಂಕಾ ಮೂಲದ 38 ಮಂದಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಮುಂಜಾಗ್ರತೆ ವಹಿಸಲು ಸಾರ್ವಜನಿಕರಿಗೆ ಕೋರಿದ್ದಾರೆ.
Mangalore Sri Lanka Economic Crisis, the possibility of Lankans entering India via sea, police warn house owners to be careful if strangers are found asking house for rent. The police department has asked to check the documents.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm