ಬ್ರೇಕಿಂಗ್ ನ್ಯೂಸ್
12-05-22 12:59 pm Mangalore Correspondent ಕರಾವಳಿ
ಮಂಗಳೂರು, ಮೇ 12 : ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಆಂತರಿಕ ಕಲಹದ ಕಾರಣ ಆಹಾರ ಕೊರತೆ ಉಂಟಾಗಿರುವುದರಿಂದ ಅಲ್ಲಿನ ಜನರು ಸಮುದ್ರ ಮಾರ್ಗದ ಮೂಲಕ ಭಾರತದತ್ತ ಬರುವ ಸಾಧ್ಯತೆಗಳಿದ್ದು ಕರಾವಳಿ ತೀರ ಪ್ರದೇಶದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕರಾವಳಿ ಕಾವಲು ಪೊಲೀಸ್ ಪಡೆಯವರು ಸೂಚನೆ ನೀಡಿದ್ದಾರೆ.
ಶ್ರೀಲಂಕಾದಲ್ಲಿ ಆಂತರಿಕ ಕಲಹ, ದೊಂಬಿಯ ಕಾರಣದಿಂದಾಗಿ ಜನರು ತತ್ತರಿಸಿದ್ದು ಸಮುದ್ರ ಮಾರ್ಗ ಅಥವಾ ಇನ್ನಿತರ ಮಾರ್ಗದ ಮೂಲಕ ಭಾರತಕ್ಕೆ ಆಗಮಿಸಿ, ಇಲ್ಲಿನ ಕರಾವಳಿ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ ಪೂರ್ವಾಪರ ವಿಚಾರಿಸಬೇಕು. ಸೂಕ್ತ ದಾಖಲಾತಿಗಳನ್ನು ಪಡೆದು ಪರಿಶೀಲನೆ ನಡೆಸಬೇಕು. ಯಾವುದೇ ವ್ಯಕ್ತಿಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಲಂಕನ್ನರು ಅಕ್ರಮವಾಗಿ ಒಳನುಸುಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಕರಾವಳಿ ಕಾವಲು ಪೊಲೀಸ್ ಪಡೆಯ ವತಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಹೆಚ್ಚಾಗಿ ನೆಲೆಸಿರುವ ಮೀನುಗಾರರಿಗೆ, ಮೀನುಗಾರಿಕಾ ಸಂಘಗಳಿಗೆ, ಹೊಟೇಲು, ಲಾಡ್ಜ್ ಗಳಿಗೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ರವಾನಿಸಲಾಗಿದೆ. ಒಂದು ವರ್ಷದ ಹಿಂದೆ ತಮಿಳುನಾಡು ಮೂಲಕ ಒಳನುಸುಳಿದ್ದ ಲಂಕಾ ಮೂಲದ 38 ಮಂದಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಮುಂಜಾಗ್ರತೆ ವಹಿಸಲು ಸಾರ್ವಜನಿಕರಿಗೆ ಕೋರಿದ್ದಾರೆ.
Mangalore Sri Lanka Economic Crisis, the possibility of Lankans entering India via sea, police warn house owners to be careful if strangers are found asking house for rent. The police department has asked to check the documents.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am