ಬ್ರೇಕಿಂಗ್ ನ್ಯೂಸ್
16-05-22 06:30 pm Udupi Correspondent ಕರಾವಳಿ
ಉಡುಪಿ, ಮೇ 16 : ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧಾರ್ಮಿಕ ಕೇಂದ್ರಗಳು ಮಸೀದಿಗಳಾಗಿ ಪರಿವರ್ತನೆ ಆಗಿರುತ್ತದೆ. ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ. ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇರಲ್ಲ. ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈಗ ಆಗುತ್ತಿರುವ ಸಮಾಜ ಪರಿವರ್ತನೆಯ ಬೆಳವಣಿಗೆಯನ್ನು ನಾವು ಸ್ವಾಗತಿಸುತ್ತೇವೆ. ಈಗ ಇದೊಂದು ರೀತಿಯ ಕಾಲಘಟ್ಟ. ಗ್ಯಾನವಾಪಿ ಮಸೀದಿ ಬಗ್ಗೆ ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪರಿಪಾಲಿಸಬೇಕು. ಹಿಂದೆ ಆಗಿಹೋದ ಬಗ್ಗೆ ಕೋರ್ಟ್ ತೀರ್ಮಾನ ಕೊಟ್ಟಿದ್ದಾದರೆ ಯಾರೂ ಇದನ್ನು ಹಿನ್ನಡೆ ಎಂದು ಭಾವಿಸಬಾರದು. ಹಿಂದೂಗಳ ಪೂಜಾ ಮಂದಿರಗಳನ್ನು ಹಿಂದುಗಳಿಗೆ ಬಿಟ್ಟುಕೊಡಿ. ಮುಸಲ್ಮಾನರ ದರ್ಗಾ ಆಗಿದ್ದರೂ ಅವನ್ನು ಮುಸಲ್ಮಾನರಿಗೇ ಬಿಟ್ಟುಕೊಡಬೇಕು. ಯಾವುದೇ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡುವ ಮಾರ್ಗದರ್ಶನದಂತೆ ನಾವು ನಡೆಯುವುದು ಸೂಕ್ತ.
ತಪ್ಪು ಆಗಿದ್ದರೆ ಅದು ತಪ್ಪೇ. ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ. ಸಂಘರ್ಷಕ್ಕೆ ಇಳಿಯದೆ ಸೌಹಾರ್ದದಿಂದ ಬಿಟ್ಟುಕೊಡಬೇಕು. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಸಹಕರಿಸಬೇಕು ಎಂದು ಉಡುಪಿಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆ ಬಗ್ಗೆ ಮಾರ್ಗದರ್ಶನ ಮಾಡಿದೆ. ಕೋರ್ಟ್ ವಿಧಿಸಿದ ನಿಯಮವನ್ನು ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ. ವಿಶೇಷ ದಿನಗಳು, ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ ಎಂದು ಹೇಳಿದರು.
Temples been converted as Mosques is not good we don't accept it says Vishwaprasanna Tirtha of Pejawar Mutt.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm