ಬ್ರೇಕಿಂಗ್ ನ್ಯೂಸ್
16-05-22 06:30 pm Udupi Correspondent ಕರಾವಳಿ
ಉಡುಪಿ, ಮೇ 16 : ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧಾರ್ಮಿಕ ಕೇಂದ್ರಗಳು ಮಸೀದಿಗಳಾಗಿ ಪರಿವರ್ತನೆ ಆಗಿರುತ್ತದೆ. ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ. ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇರಲ್ಲ. ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈಗ ಆಗುತ್ತಿರುವ ಸಮಾಜ ಪರಿವರ್ತನೆಯ ಬೆಳವಣಿಗೆಯನ್ನು ನಾವು ಸ್ವಾಗತಿಸುತ್ತೇವೆ. ಈಗ ಇದೊಂದು ರೀತಿಯ ಕಾಲಘಟ್ಟ. ಗ್ಯಾನವಾಪಿ ಮಸೀದಿ ಬಗ್ಗೆ ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪರಿಪಾಲಿಸಬೇಕು. ಹಿಂದೆ ಆಗಿಹೋದ ಬಗ್ಗೆ ಕೋರ್ಟ್ ತೀರ್ಮಾನ ಕೊಟ್ಟಿದ್ದಾದರೆ ಯಾರೂ ಇದನ್ನು ಹಿನ್ನಡೆ ಎಂದು ಭಾವಿಸಬಾರದು. ಹಿಂದೂಗಳ ಪೂಜಾ ಮಂದಿರಗಳನ್ನು ಹಿಂದುಗಳಿಗೆ ಬಿಟ್ಟುಕೊಡಿ. ಮುಸಲ್ಮಾನರ ದರ್ಗಾ ಆಗಿದ್ದರೂ ಅವನ್ನು ಮುಸಲ್ಮಾನರಿಗೇ ಬಿಟ್ಟುಕೊಡಬೇಕು. ಯಾವುದೇ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡುವ ಮಾರ್ಗದರ್ಶನದಂತೆ ನಾವು ನಡೆಯುವುದು ಸೂಕ್ತ.
ತಪ್ಪು ಆಗಿದ್ದರೆ ಅದು ತಪ್ಪೇ. ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ. ಸಂಘರ್ಷಕ್ಕೆ ಇಳಿಯದೆ ಸೌಹಾರ್ದದಿಂದ ಬಿಟ್ಟುಕೊಡಬೇಕು. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಸಹಕರಿಸಬೇಕು ಎಂದು ಉಡುಪಿಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆ ಬಗ್ಗೆ ಮಾರ್ಗದರ್ಶನ ಮಾಡಿದೆ. ಕೋರ್ಟ್ ವಿಧಿಸಿದ ನಿಯಮವನ್ನು ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ. ವಿಶೇಷ ದಿನಗಳು, ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ ಎಂದು ಹೇಳಿದರು.
Temples been converted as Mosques is not good we don't accept it says Vishwaprasanna Tirtha of Pejawar Mutt.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm