ಬ್ರೇಕಿಂಗ್ ನ್ಯೂಸ್
16-05-22 07:17 pm Mangalore Correspondent ಕರಾವಳಿ
ಮಂಗಳೂರು, ಮೇ 16 : ಹವಾಮಾನ ಇಲಾಖೆಯ ಮುನ್ಸೂಚನೆ ನಡುವೆಯೇ ಕರಾವಳಿಯಲ್ಲಿ ಭಾರೀ ಸಿಡಿಲು ಮಳೆ ಶುರುವಾಗಿದೆ. ಸೋಮವಾರ ಬೆಳಗ್ಗಿನಿಂದಲೇ ಭಾರೀ ಮೋಡ ಕವಿದಿತ್ತು. ಸಂಜೆಯಾಗುತ್ತಲೇ ಗುಡುಗು, ಮಿಂಚಿನ ಸಹಿತ ಮಳೆಯಾಗತೊಡಗಿದೆ.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಸೋಮವಾರ ಸಂಜೆ ಮಳೆಯಾಗಿದೆ. ಇದೇ ವೇಳೆ, ಉಡುಪಿ ಜಿಲ್ಲಾಡಳಿತ ಮಳೆಯ ಬಗ್ಗೆ ಎಲರ್ಟ್ ಘೋಷಣೆ ಮಾಡಿದೆ. ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
/__opt__aboutcom__coeus__resources__content_migration__mnn__images__2017__03__raindrops-plants-smell-57c4545c1bb844c0a2cd7e0252cf6d2f.jpg)

ಮೇ 17 ಮತ್ತು 19 ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಎಲರ್ಟ್ ಹಾಗೂ 18 ರಂದು ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲಿ ಇರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ದುಬೈ ಮಾರ್ಕೆಟ್ ಗೆ ನುಗ್ಗಿದ ನೀರು

ಹಠಾತ್ ಮಳೆಯಿಂದಾಗಿ ಮಂಗಳೂರು ನಗರದ ಕೆಲವು ಕಡೆ ಅಂಗಡಿಗಳಿಗೆ ನೀರು ನುಗ್ಗಿದೆ. ಹಂಪನಕಟ್ಟೆಯ ದುಬೈ ಮಾರ್ಕೆಟ್ ನಲ್ಲಿ ನೀರು ನುಗ್ಗಿದ ಕಾರಣ ವ್ಯಾಪಾರಸ್ಥರು ಗಲಿಬಿಲಿಗೆ ಒಳಗಾದರು. ಹೊರಗೆ ಇರಿಸಿದ್ದ ಸರಕು ವಸ್ತುಗಳನ್ನು ನೀರಿನಲ್ಲಿ ಒದ್ದೆಯಾಗದಂತೆ ಒಳಗೊಯ್ದರು. ಸಿಟಿ ಸೆಂಟರ್ ಮಾಲ್ ಎದುರಿನ ರಸ್ತೆ, ಎಂಜಿ ರೋಡ್ ಸೇರಿದಂತೆ ಕೆಲವು ರಸ್ತೆಗಳಲ್ಲಿ ಮೊದಲ ಮಳೆಗೇ ನೀರು ನಿಂತು ವಾಹನ ಸವಾರರು ಪರದಾಟ ಅನುಭವಿಸಿದರು.
Deputy commissioner (DC) of Dakshina Kannada Dr Rajendra K V and Udupi DC M Kurma Rao on Monday May 16, warned of a heavy rainfall that has been forecast for the coastal districts during the next five days. In a press release, the district disaster management authority has issued a red alert on May 18 while an orange alert has been sounded out on May 17 and 19 in Dakshina Kannada and Udupi district.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm