ಬ್ರೇಕಿಂಗ್ ನ್ಯೂಸ್
17-05-22 02:18 pm Mangalore Correspondent ಕರಾವಳಿ
ಉಳ್ಳಾಲ, ಮೇ 17 : ಶಾಲೆ ಶುರುವಾದ ದಿನವೇ ಸುರಿದ ಭಾರೀ ಮಳೆಗೆ ತಲಪಾಡಿ ಬಳಿಯ ಕಿನ್ಯ ಗ್ರಾಮದ ಬೆಳರಿಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡಿದ್ದ ಕಟ್ಟಡವು ಧರೆಗುರುಳಿದ್ದು ಅದೃಷ್ಟವಶಾತ್ ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗುವಂತಾಗಿದೆ.
ಕಿನ್ಯ ಗ್ರಾಮದ ಬೆಳರಿಂಗೆ ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ಎಂಟನೇ ವರೆಗೆ ತರಗತಿಗಳಿದ್ದು ಸುಮಾರು 127 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ ಎಂದು ಕಳೆದ ವರುಷವೇ ಅದೆಷ್ಟೋ ಬಾರಿ ಶಿಕ್ಷಣ ಇಲಾಖಾಧಿಕಾರಿಗಳಿಗೆ ಶಾಲಾಭಿವೃದ್ಧಿ ಸಮಿತಿಯವರು ದೂರು ನೀಡಿದ್ದರು. ಕಾಟಾಚಾರಕ್ಕೆ ಸ್ಥಳಕ್ಕೆ ಪರಿಶೀಲನೆಗೆ ಬಂದಿದ್ದ ಜಿಲ್ಲಾ ಪಂಚಾಯತ್ ಇಂಜಿನಿಯರ್ ನಿತಿನ್ ಎಂಬವರು ಕಟ್ಟಡ ಗಟ್ಟಿ ಮುಟ್ಟಾಗಿದೆ ಎಂದು ಸರ್ಟಿಫಿಕೇಟ್ ನೀಡಿ ಬಂದ ದಾರಿಯಲ್ಲೇ ಹಿಂತಿರುಗುತ್ತಿದ್ದರು ಎನ್ನುವ ಆರೋಪಗಳಿವೆ.



ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಮೊದಲ ಮಳೆಗೇ ಶಿಥಿಲಗೊಂಡಿದ್ದ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಶಾಲಾರಂಭದ ರಾತ್ರಿಯೇ ಧರೆಗುರುಳಿದ್ದು ಘಟನೆ ರಾತ್ರಿ ವೇಳೆ ನಡೆದುದರಿಂದ ಅನಾಹುತ ಸಂಭವಿಸಿಲ್ಲ.


ಕಟ್ಟಡ ಶಿಥಿಲಗೊಂಡಿರುವುದನ್ನ ಗಮನಿಸಿದ್ದ ಶಾಲಾಭಿವೃದ್ಧಿ ಸಮಿತಿಯವರು ಸೋಮವಾರ ಆ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನೀಡದೆ ಪಕ್ಕದ ಮದರಸ ಕಟ್ಟಡದಲ್ಲಿ ತರಗತಿ ನೀಡಿ ಮುಂಜಾಗರೂಕತೆ ವಹಿಸಿದ್ದರು. ಘಟನಾ ಸ್ಥಳಕ್ಕೆ ಇಂದು ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನಾದರೂ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಿ ಕೊಡುವಂತೆ ಶಾಲಾಭಿವೃದ್ಧಿ ಸಮಿತಿಯವರು ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.
Mangalore School collapsed after the first rains in Ullal, kids escaped from a big danger. The incident happened at Kinya in Talapady.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 08:31 pm
HK News Staffer
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm