ಬ್ರೇಕಿಂಗ್ ನ್ಯೂಸ್
17-05-22 02:18 pm Mangalore Correspondent ಕರಾವಳಿ
ಉಳ್ಳಾಲ, ಮೇ 17 : ಶಾಲೆ ಶುರುವಾದ ದಿನವೇ ಸುರಿದ ಭಾರೀ ಮಳೆಗೆ ತಲಪಾಡಿ ಬಳಿಯ ಕಿನ್ಯ ಗ್ರಾಮದ ಬೆಳರಿಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡಿದ್ದ ಕಟ್ಟಡವು ಧರೆಗುರುಳಿದ್ದು ಅದೃಷ್ಟವಶಾತ್ ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗುವಂತಾಗಿದೆ.
ಕಿನ್ಯ ಗ್ರಾಮದ ಬೆಳರಿಂಗೆ ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ಎಂಟನೇ ವರೆಗೆ ತರಗತಿಗಳಿದ್ದು ಸುಮಾರು 127 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ ಎಂದು ಕಳೆದ ವರುಷವೇ ಅದೆಷ್ಟೋ ಬಾರಿ ಶಿಕ್ಷಣ ಇಲಾಖಾಧಿಕಾರಿಗಳಿಗೆ ಶಾಲಾಭಿವೃದ್ಧಿ ಸಮಿತಿಯವರು ದೂರು ನೀಡಿದ್ದರು. ಕಾಟಾಚಾರಕ್ಕೆ ಸ್ಥಳಕ್ಕೆ ಪರಿಶೀಲನೆಗೆ ಬಂದಿದ್ದ ಜಿಲ್ಲಾ ಪಂಚಾಯತ್ ಇಂಜಿನಿಯರ್ ನಿತಿನ್ ಎಂಬವರು ಕಟ್ಟಡ ಗಟ್ಟಿ ಮುಟ್ಟಾಗಿದೆ ಎಂದು ಸರ್ಟಿಫಿಕೇಟ್ ನೀಡಿ ಬಂದ ದಾರಿಯಲ್ಲೇ ಹಿಂತಿರುಗುತ್ತಿದ್ದರು ಎನ್ನುವ ಆರೋಪಗಳಿವೆ.



ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಮೊದಲ ಮಳೆಗೇ ಶಿಥಿಲಗೊಂಡಿದ್ದ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಶಾಲಾರಂಭದ ರಾತ್ರಿಯೇ ಧರೆಗುರುಳಿದ್ದು ಘಟನೆ ರಾತ್ರಿ ವೇಳೆ ನಡೆದುದರಿಂದ ಅನಾಹುತ ಸಂಭವಿಸಿಲ್ಲ.


ಕಟ್ಟಡ ಶಿಥಿಲಗೊಂಡಿರುವುದನ್ನ ಗಮನಿಸಿದ್ದ ಶಾಲಾಭಿವೃದ್ಧಿ ಸಮಿತಿಯವರು ಸೋಮವಾರ ಆ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನೀಡದೆ ಪಕ್ಕದ ಮದರಸ ಕಟ್ಟಡದಲ್ಲಿ ತರಗತಿ ನೀಡಿ ಮುಂಜಾಗರೂಕತೆ ವಹಿಸಿದ್ದರು. ಘಟನಾ ಸ್ಥಳಕ್ಕೆ ಇಂದು ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನಾದರೂ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಿ ಕೊಡುವಂತೆ ಶಾಲಾಭಿವೃದ್ಧಿ ಸಮಿತಿಯವರು ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.
Mangalore School collapsed after the first rains in Ullal, kids escaped from a big danger. The incident happened at Kinya in Talapady.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm