ಬ್ರೇಕಿಂಗ್ ನ್ಯೂಸ್
17-05-22 02:18 pm Mangalore Correspondent ಕರಾವಳಿ
ಉಳ್ಳಾಲ, ಮೇ 17 : ಶಾಲೆ ಶುರುವಾದ ದಿನವೇ ಸುರಿದ ಭಾರೀ ಮಳೆಗೆ ತಲಪಾಡಿ ಬಳಿಯ ಕಿನ್ಯ ಗ್ರಾಮದ ಬೆಳರಿಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡಿದ್ದ ಕಟ್ಟಡವು ಧರೆಗುರುಳಿದ್ದು ಅದೃಷ್ಟವಶಾತ್ ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗುವಂತಾಗಿದೆ.
ಕಿನ್ಯ ಗ್ರಾಮದ ಬೆಳರಿಂಗೆ ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ಎಂಟನೇ ವರೆಗೆ ತರಗತಿಗಳಿದ್ದು ಸುಮಾರು 127 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ ಎಂದು ಕಳೆದ ವರುಷವೇ ಅದೆಷ್ಟೋ ಬಾರಿ ಶಿಕ್ಷಣ ಇಲಾಖಾಧಿಕಾರಿಗಳಿಗೆ ಶಾಲಾಭಿವೃದ್ಧಿ ಸಮಿತಿಯವರು ದೂರು ನೀಡಿದ್ದರು. ಕಾಟಾಚಾರಕ್ಕೆ ಸ್ಥಳಕ್ಕೆ ಪರಿಶೀಲನೆಗೆ ಬಂದಿದ್ದ ಜಿಲ್ಲಾ ಪಂಚಾಯತ್ ಇಂಜಿನಿಯರ್ ನಿತಿನ್ ಎಂಬವರು ಕಟ್ಟಡ ಗಟ್ಟಿ ಮುಟ್ಟಾಗಿದೆ ಎಂದು ಸರ್ಟಿಫಿಕೇಟ್ ನೀಡಿ ಬಂದ ದಾರಿಯಲ್ಲೇ ಹಿಂತಿರುಗುತ್ತಿದ್ದರು ಎನ್ನುವ ಆರೋಪಗಳಿವೆ.



ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಮೊದಲ ಮಳೆಗೇ ಶಿಥಿಲಗೊಂಡಿದ್ದ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಶಾಲಾರಂಭದ ರಾತ್ರಿಯೇ ಧರೆಗುರುಳಿದ್ದು ಘಟನೆ ರಾತ್ರಿ ವೇಳೆ ನಡೆದುದರಿಂದ ಅನಾಹುತ ಸಂಭವಿಸಿಲ್ಲ.


ಕಟ್ಟಡ ಶಿಥಿಲಗೊಂಡಿರುವುದನ್ನ ಗಮನಿಸಿದ್ದ ಶಾಲಾಭಿವೃದ್ಧಿ ಸಮಿತಿಯವರು ಸೋಮವಾರ ಆ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನೀಡದೆ ಪಕ್ಕದ ಮದರಸ ಕಟ್ಟಡದಲ್ಲಿ ತರಗತಿ ನೀಡಿ ಮುಂಜಾಗರೂಕತೆ ವಹಿಸಿದ್ದರು. ಘಟನಾ ಸ್ಥಳಕ್ಕೆ ಇಂದು ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನಾದರೂ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಿ ಕೊಡುವಂತೆ ಶಾಲಾಭಿವೃದ್ಧಿ ಸಮಿತಿಯವರು ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.
Mangalore School collapsed after the first rains in Ullal, kids escaped from a big danger. The incident happened at Kinya in Talapady.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm