ಬ್ರೇಕಿಂಗ್ ನ್ಯೂಸ್
17-05-22 02:18 pm Mangalore Correspondent ಕರಾವಳಿ
ಉಳ್ಳಾಲ, ಮೇ 17 : ಶಾಲೆ ಶುರುವಾದ ದಿನವೇ ಸುರಿದ ಭಾರೀ ಮಳೆಗೆ ತಲಪಾಡಿ ಬಳಿಯ ಕಿನ್ಯ ಗ್ರಾಮದ ಬೆಳರಿಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡಿದ್ದ ಕಟ್ಟಡವು ಧರೆಗುರುಳಿದ್ದು ಅದೃಷ್ಟವಶಾತ್ ರಾತ್ರಿ ವೇಳೆ ಘಟನೆ ಸಂಭವಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗುವಂತಾಗಿದೆ.
ಕಿನ್ಯ ಗ್ರಾಮದ ಬೆಳರಿಂಗೆ ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ಎಂಟನೇ ವರೆಗೆ ತರಗತಿಗಳಿದ್ದು ಸುಮಾರು 127 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ ಎಂದು ಕಳೆದ ವರುಷವೇ ಅದೆಷ್ಟೋ ಬಾರಿ ಶಿಕ್ಷಣ ಇಲಾಖಾಧಿಕಾರಿಗಳಿಗೆ ಶಾಲಾಭಿವೃದ್ಧಿ ಸಮಿತಿಯವರು ದೂರು ನೀಡಿದ್ದರು. ಕಾಟಾಚಾರಕ್ಕೆ ಸ್ಥಳಕ್ಕೆ ಪರಿಶೀಲನೆಗೆ ಬಂದಿದ್ದ ಜಿಲ್ಲಾ ಪಂಚಾಯತ್ ಇಂಜಿನಿಯರ್ ನಿತಿನ್ ಎಂಬವರು ಕಟ್ಟಡ ಗಟ್ಟಿ ಮುಟ್ಟಾಗಿದೆ ಎಂದು ಸರ್ಟಿಫಿಕೇಟ್ ನೀಡಿ ಬಂದ ದಾರಿಯಲ್ಲೇ ಹಿಂತಿರುಗುತ್ತಿದ್ದರು ಎನ್ನುವ ಆರೋಪಗಳಿವೆ.



ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಮೊದಲ ಮಳೆಗೇ ಶಿಥಿಲಗೊಂಡಿದ್ದ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಶಾಲಾರಂಭದ ರಾತ್ರಿಯೇ ಧರೆಗುರುಳಿದ್ದು ಘಟನೆ ರಾತ್ರಿ ವೇಳೆ ನಡೆದುದರಿಂದ ಅನಾಹುತ ಸಂಭವಿಸಿಲ್ಲ.


ಕಟ್ಟಡ ಶಿಥಿಲಗೊಂಡಿರುವುದನ್ನ ಗಮನಿಸಿದ್ದ ಶಾಲಾಭಿವೃದ್ಧಿ ಸಮಿತಿಯವರು ಸೋಮವಾರ ಆ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನೀಡದೆ ಪಕ್ಕದ ಮದರಸ ಕಟ್ಟಡದಲ್ಲಿ ತರಗತಿ ನೀಡಿ ಮುಂಜಾಗರೂಕತೆ ವಹಿಸಿದ್ದರು. ಘಟನಾ ಸ್ಥಳಕ್ಕೆ ಇಂದು ಕಿನ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನಾದರೂ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಿ ಕೊಡುವಂತೆ ಶಾಲಾಭಿವೃದ್ಧಿ ಸಮಿತಿಯವರು ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.
Mangalore School collapsed after the first rains in Ullal, kids escaped from a big danger. The incident happened at Kinya in Talapady.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm