ಬ್ರೇಕಿಂಗ್ ನ್ಯೂಸ್
19-05-22 04:54 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಜೀರು ಗ್ರಾಮದ ಪಾಣೆಲ ನಾಗರಿಕರ ಬಹು ದಿನಗಳ ಸರಕಾರಿ ಬಸ್ಸಿನ ಬೇಡಿಕೆ ಈಡೇರಿದ್ದು ಮಾಜಿ ಸಚಿವ ಯು.ಟಿ.ಖಾದರ್ ನೂತನ ಬಸ್ಸಿಗೆ ಚಾಲನೆ ನೀಡುವುದರ ಜೊತೆಗೆ ಬಸ್ಸನ್ನು ಚಲಾಯಿಸಿ ಗಮನಸೆಳೆದರು.
ಪಜೀರು ಗ್ರಾಮದ ಪಾಣೆಲಕ್ಕೆ ಇಂದು ಬೆಳಗ್ಗೆ ಸರಕಾರಿ ಬಸ್ಸು ಓಡಾಟ ಪ್ರಾರಂಭಿಸಿದೆ. ಪಾಣೆಲ ಪ್ರದೇಶಕ್ಕೆ ಸರಕಾರಿ ಬಸ್ಸು ಒದಗಿಸುವಂತೆ ಸಾರಿಗೆ ಇಲಾಖೆಗೆ ಶಾಸಕ ಯು.ಟಿ.ಖಾದರ್ ಅವರು ಈ ಮೊದಲು ಸೂಚನೆ ನೀಡಿದಾಗ ರಸ್ತೆಯಲ್ಲಿ ದೊಡ್ಡ ಬಸ್ಸು ಸಂಚರಿಸುವ ಅವಕಾಶ ಇಲ್ಲದಿದ್ದರಿಂದ ಪಾಣೇಲ ಜನತೆಯ ಬಸ್ಸಿನ ಕನಸು ನನಸಾಗಿಯೇ ಉಳಿದಿತ್ತು. ಆದರೆ ಯು.ಟಿ.ಖಾದರ್ ಅಷ್ಟಕ್ಕೇ ಸುಮ್ಮನಿರದೇ ಸುಮಾರು ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮ ಚಾವಡಿ - ಪಜೀರು - ಪಾಣೇಲ - ಪಡೀಲ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರಿಗೆ ಇಲಾಖೆಗೆ ಬಸ್ಸು ಒದಗಿಸಲು ಸೂಚನೆ ನೀಡಿದರು.


ಇದೀಗ ಸಾರಿಗೆ ಇಲಾಖೆಯ ನೂತನ ಬಸ್ ಇಂದು ಬೆಳಗ್ಗೆ 06.30ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಟು 7.45ಕ್ಕೆ ಪಾಣೇಲ ತಲುಪಿದ್ದು ಶಾಸಕ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಹಿರಿಯರಾದ ವೆಂಕಪ್ಪ ಕಾಜವರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.
ನೂತನ ಸರಕಾರಿ ಬಸ್ ಮಂಗಳೂರು- ತೊಕ್ಕೊಟ್ಟು-ದೇರಳಕಟ್ಟೆ- ಕೊಣಾಜೆ-ಗ್ರಾಮಚಾವಡಿ- ಪಜೀರು-ಪಾಣೇಲ- ಪಡೀಲು-ಬೋಳಿಯಾರು- ಕುರ್ನಾಡು-ಮಿತ್ತಕೋಡಿ ಮಾರ್ಗವಾಗಿ ಸಂಚರಿಸಿ ಮುಡಿಪು ತಲುಪಲಿದ್ದು ನಂತರ ಮುಡಿಪು ಬಿಟ್ಟು ಅದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಬಸ್ಸು ಬೆಳಗ್ಗೆ ಮತ್ತು ಸಂಜೆ ತಲಾ ಎರಡು ಟ್ರಿಪ್ ಕಾರ್ಯಾಚರಿಸಲಿದೆ.
Mangalore to Pajir Govt Bus inaugurated by U T Khader, MLA drives the bus by himself and becomes a Bus Driver for a while.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm