ಬ್ರೇಕಿಂಗ್ ನ್ಯೂಸ್
19-05-22 04:54 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಜೀರು ಗ್ರಾಮದ ಪಾಣೆಲ ನಾಗರಿಕರ ಬಹು ದಿನಗಳ ಸರಕಾರಿ ಬಸ್ಸಿನ ಬೇಡಿಕೆ ಈಡೇರಿದ್ದು ಮಾಜಿ ಸಚಿವ ಯು.ಟಿ.ಖಾದರ್ ನೂತನ ಬಸ್ಸಿಗೆ ಚಾಲನೆ ನೀಡುವುದರ ಜೊತೆಗೆ ಬಸ್ಸನ್ನು ಚಲಾಯಿಸಿ ಗಮನಸೆಳೆದರು.
ಪಜೀರು ಗ್ರಾಮದ ಪಾಣೆಲಕ್ಕೆ ಇಂದು ಬೆಳಗ್ಗೆ ಸರಕಾರಿ ಬಸ್ಸು ಓಡಾಟ ಪ್ರಾರಂಭಿಸಿದೆ. ಪಾಣೆಲ ಪ್ರದೇಶಕ್ಕೆ ಸರಕಾರಿ ಬಸ್ಸು ಒದಗಿಸುವಂತೆ ಸಾರಿಗೆ ಇಲಾಖೆಗೆ ಶಾಸಕ ಯು.ಟಿ.ಖಾದರ್ ಅವರು ಈ ಮೊದಲು ಸೂಚನೆ ನೀಡಿದಾಗ ರಸ್ತೆಯಲ್ಲಿ ದೊಡ್ಡ ಬಸ್ಸು ಸಂಚರಿಸುವ ಅವಕಾಶ ಇಲ್ಲದಿದ್ದರಿಂದ ಪಾಣೇಲ ಜನತೆಯ ಬಸ್ಸಿನ ಕನಸು ನನಸಾಗಿಯೇ ಉಳಿದಿತ್ತು. ಆದರೆ ಯು.ಟಿ.ಖಾದರ್ ಅಷ್ಟಕ್ಕೇ ಸುಮ್ಮನಿರದೇ ಸುಮಾರು ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮ ಚಾವಡಿ - ಪಜೀರು - ಪಾಣೇಲ - ಪಡೀಲ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರಿಗೆ ಇಲಾಖೆಗೆ ಬಸ್ಸು ಒದಗಿಸಲು ಸೂಚನೆ ನೀಡಿದರು.


ಇದೀಗ ಸಾರಿಗೆ ಇಲಾಖೆಯ ನೂತನ ಬಸ್ ಇಂದು ಬೆಳಗ್ಗೆ 06.30ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಟು 7.45ಕ್ಕೆ ಪಾಣೇಲ ತಲುಪಿದ್ದು ಶಾಸಕ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಹಿರಿಯರಾದ ವೆಂಕಪ್ಪ ಕಾಜವರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.
ನೂತನ ಸರಕಾರಿ ಬಸ್ ಮಂಗಳೂರು- ತೊಕ್ಕೊಟ್ಟು-ದೇರಳಕಟ್ಟೆ- ಕೊಣಾಜೆ-ಗ್ರಾಮಚಾವಡಿ- ಪಜೀರು-ಪಾಣೇಲ- ಪಡೀಲು-ಬೋಳಿಯಾರು- ಕುರ್ನಾಡು-ಮಿತ್ತಕೋಡಿ ಮಾರ್ಗವಾಗಿ ಸಂಚರಿಸಿ ಮುಡಿಪು ತಲುಪಲಿದ್ದು ನಂತರ ಮುಡಿಪು ಬಿಟ್ಟು ಅದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಬಸ್ಸು ಬೆಳಗ್ಗೆ ಮತ್ತು ಸಂಜೆ ತಲಾ ಎರಡು ಟ್ರಿಪ್ ಕಾರ್ಯಾಚರಿಸಲಿದೆ.
Mangalore to Pajir Govt Bus inaugurated by U T Khader, MLA drives the bus by himself and becomes a Bus Driver for a while.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm