ಬ್ರೇಕಿಂಗ್ ನ್ಯೂಸ್
19-05-22 04:54 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಜೀರು ಗ್ರಾಮದ ಪಾಣೆಲ ನಾಗರಿಕರ ಬಹು ದಿನಗಳ ಸರಕಾರಿ ಬಸ್ಸಿನ ಬೇಡಿಕೆ ಈಡೇರಿದ್ದು ಮಾಜಿ ಸಚಿವ ಯು.ಟಿ.ಖಾದರ್ ನೂತನ ಬಸ್ಸಿಗೆ ಚಾಲನೆ ನೀಡುವುದರ ಜೊತೆಗೆ ಬಸ್ಸನ್ನು ಚಲಾಯಿಸಿ ಗಮನಸೆಳೆದರು.
ಪಜೀರು ಗ್ರಾಮದ ಪಾಣೆಲಕ್ಕೆ ಇಂದು ಬೆಳಗ್ಗೆ ಸರಕಾರಿ ಬಸ್ಸು ಓಡಾಟ ಪ್ರಾರಂಭಿಸಿದೆ. ಪಾಣೆಲ ಪ್ರದೇಶಕ್ಕೆ ಸರಕಾರಿ ಬಸ್ಸು ಒದಗಿಸುವಂತೆ ಸಾರಿಗೆ ಇಲಾಖೆಗೆ ಶಾಸಕ ಯು.ಟಿ.ಖಾದರ್ ಅವರು ಈ ಮೊದಲು ಸೂಚನೆ ನೀಡಿದಾಗ ರಸ್ತೆಯಲ್ಲಿ ದೊಡ್ಡ ಬಸ್ಸು ಸಂಚರಿಸುವ ಅವಕಾಶ ಇಲ್ಲದಿದ್ದರಿಂದ ಪಾಣೇಲ ಜನತೆಯ ಬಸ್ಸಿನ ಕನಸು ನನಸಾಗಿಯೇ ಉಳಿದಿತ್ತು. ಆದರೆ ಯು.ಟಿ.ಖಾದರ್ ಅಷ್ಟಕ್ಕೇ ಸುಮ್ಮನಿರದೇ ಸುಮಾರು ಒಂದೂವರೆ ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮ ಚಾವಡಿ - ಪಜೀರು - ಪಾಣೇಲ - ಪಡೀಲ್ ರಸ್ತೆಯನ್ನು ಅಭಿವೃದ್ಧಿಪಡಿಸಿ ಮತ್ತೆ ಸಾರಿಗೆ ಇಲಾಖೆಗೆ ಬಸ್ಸು ಒದಗಿಸಲು ಸೂಚನೆ ನೀಡಿದರು.
ಇದೀಗ ಸಾರಿಗೆ ಇಲಾಖೆಯ ನೂತನ ಬಸ್ ಇಂದು ಬೆಳಗ್ಗೆ 06.30ಕ್ಕೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಹೊರಟು 7.45ಕ್ಕೆ ಪಾಣೇಲ ತಲುಪಿದ್ದು ಶಾಸಕ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಹಿರಿಯರಾದ ವೆಂಕಪ್ಪ ಕಾಜವರವರು ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.
ನೂತನ ಸರಕಾರಿ ಬಸ್ ಮಂಗಳೂರು- ತೊಕ್ಕೊಟ್ಟು-ದೇರಳಕಟ್ಟೆ- ಕೊಣಾಜೆ-ಗ್ರಾಮಚಾವಡಿ- ಪಜೀರು-ಪಾಣೇಲ- ಪಡೀಲು-ಬೋಳಿಯಾರು- ಕುರ್ನಾಡು-ಮಿತ್ತಕೋಡಿ ಮಾರ್ಗವಾಗಿ ಸಂಚರಿಸಿ ಮುಡಿಪು ತಲುಪಲಿದ್ದು ನಂತರ ಮುಡಿಪು ಬಿಟ್ಟು ಅದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಬಸ್ಸು ಬೆಳಗ್ಗೆ ಮತ್ತು ಸಂಜೆ ತಲಾ ಎರಡು ಟ್ರಿಪ್ ಕಾರ್ಯಾಚರಿಸಲಿದೆ.
Mangalore to Pajir Govt Bus inaugurated by U T Khader, MLA drives the bus by himself and becomes a Bus Driver for a while.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm