ಬ್ರೇಕಿಂಗ್ ನ್ಯೂಸ್
20-05-22 12:05 pm Mangalore Correspondent ಕರಾವಳಿ
ಮಂಗಳೂರು, ಮೇ 20 : ನಾರಾಯಣ ಗುರುಗಳಂತಹ ದಾರ್ಶನಿಕರ ಬಗೆಗಿನ ಪಠ್ಯವನ್ನು ತೆಗೆದು ಹಾಕಿದ್ದು ಘೋರ ಅಪರಾಧ. ತೆಗೆದು ಹಾಕಿದ ಪಠ್ಯವನ್ನು ಮತ್ತೆ ಸೇರಿಸಬೇಕೆಂದು ನಾನು ಹೇಳುತ್ತಿಲ್ಲ. ಆದರೆ ಈ ಪ್ರಮಾದಕ್ಕಾಗಿ ನಾರಾಯಣ ಗುರುಗಳನ್ನು ಕುಲಗುರುಗಳೆಂದು ಹೇಳಿಕೊಳ್ಳುವ ಸಮುದಾಯಕ್ಕೆ ಸೇರಿದ ಕರಾವಳಿಯ ಇಬ್ಬರು ನಾಯಕರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಸಮುದಾಯದ ಪರವಾಗಿ ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಬೇರೆ ಬೇರೆ ಪಕ್ಷಗಳ ಕಾರ್ಯಕರ್ತರು, ನಾಯಕರಿಗೆ ಬೇರೆ ಬೇರೆಯದೇ ಆದ ವ್ಯಕ್ತಿಗಳು ಆದರ್ಶರಾಗಿರಬಹುದು. ಗೋಡ್ಸೆ, ಗಾಂಧಿ ಅಭಿಮಾನಿಗಳು ಇರಬಹುದು. ಒಂದು ಸಂಘಟನೆಯ ಮುಖ್ಯಸ್ಥ ಹೆಡಗೇವಾರ್ ಬಗ್ಗೆ ಅಭಿಮಾನ ಇರಬಹುದು. ಯಾರು ಬೇಕಾದರೂ ಪ್ರಚಾರ ಸಭೆಯಲ್ಲಿ ಗೋಡ್ಸೆ, ಹೆಡಗೇವಾರ್ ಆದರ್ಶ ಎಂದು ಹೇಳಿಕೊಳ್ಳಬಹುದು. ಅದಕ್ಕೆ ನಮ್ಮ ಆಕ್ಷೇಪವಿಲ್ಲ.
ಆದರೆ ಸರ್ವಜನಾಂಗದ ಶಾಂತಿಯ ತೋಟ ಎಂದು ಬಣ್ಣಿತವಾಗಿರುವ ಕರ್ನಾಟಕದಲ್ಲಿ ಒಬ್ಬ ದಾರ್ಶನಿಕ ವ್ಯಕ್ತಿಗೆ ಅಪಮಾನ ಆಗುವುದು ಆಗಬಾರದಿತ್ತು. ದಾರ್ಶನಿಕ ವ್ಯಕ್ತಿಗಳಿಗೆ ಅಪಮಾನ ಮಾಡುವುದು ಘೋರ ಅಪರಾಧ. ಇದರ ಹಿಂದಿನ ದುರುದ್ದೇಶ ಏನೆನ್ನುವುದು ತಿಳಿಯುತ್ತದೆ. ಇದು ಒಂದು ರೀತಿಯ ರಾಜಕೀಯ ಗಿಮಿಕ್. ಪಿಟ್ಟಿ ಪಾಲಿಟಿಕ್ಸ್ ಅಂತ ಹೇಳಬೇಕಷ್ಟೆ.
ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ಒಪ್ಪುವುದಾದರೆ ಮಂಗಳೂರಿನ ರೈಲು ನಿಲ್ದಾಣ ಅಥವಾ ಏರ್ಪೋರ್ಟ್ ಗೆ ಅವರ ಹೆಸರು ಇಡಬೇಕಿತ್ತು. ಚುನಾವಣೆ ನೆಪದಲ್ಲಿ ಏನೋ ಹೆಸರು ಬದಲಾವಣೆ ಮಾಡಬಹುದು. ಆದರೆ ಇದರ ಹಿಂದಿನ ನೀತಿ ಏನು ಎನ್ನುವುದು ತಿಳಿಯ ಬೇಕಾಗುತ್ತದೆ. ನಾರಾಯಣ ಗುರುಗಳ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಒಬ್ಬ ಮಂತ್ರಿ ಹೇಳುತ್ತಾರೆ. ಆದರೆ ಈ ವಿಚಾರವನ್ನು ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಲ್ಲ. ಪ್ರತಿಷ್ಠಿತ ಪತ್ರಿಕೆಗಳು, ಚಿಂತಕರು ಪ್ರಶ್ನೆ ಎತ್ತಿರುವುದು. ಹಾಗಾಗಿ ಉತ್ತರ ಕೊಡಬೇಕಾಗುತ್ತದೆ ಎಂದು ರೈ ಹೇಳಿದರು.
ಪಠ್ಯ ಪುಸ್ತಕ ಮರು ಪರಿಷ್ಕರಣಾ ಸಮಿತಿಯ ಬಗ್ಗೆಯೇ ಆಕ್ಷೇಪ ಇದೆ. ದಾರ್ಶನಿಕ ವ್ಯಕ್ತಿಗಳ ಹೆಸರು, ಅವರ ವಿಚಾರಗಳನ್ನು ಪಠ್ಯದಿಂದ ತೆಗೆದು ಹಾಕುವುದರ ಹಿಂದಿನ ಅಜೆಂಡಾ ಅರ್ಥ ಮಾಡಬೇಕಾಗುತ್ತದೆ. ಏನೇ ರಾಜಕೀಯ ಇರಲಿ, ಬಿಲ್ಲವ, ಈಡಿಗರ ಪಾಲಿನ ಗುರುಗಳಿಗಾದ ಅವಮಾನಕ್ಕಾಗಿ ಅವರನ್ನು ಪ್ರತಿನಿಧಿಸುವ ನಾಯಕರು ರಾಜಿನಾಮೆ ನೀಡಬೇಕು ಎಂದು ಪರೋಕ್ಷವಾಗಿ ಸುನಿಲ್ ಕುಮಾರ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ಹೆಸರೇಳದೆ ರಮಾನಾಥ ರೈ ರಾಜಿನಾಮೆಗೆ ಒತ್ತಾಯಿಸಿದರು.
ಸುದ್ದಿಗೋಷ್ಟಿಯಲ್ಲಿ ಶಶಿಧರ್ ಹೆಗ್ಡೆ, ಇಬ್ರಾಹಿಂ ಕೋಡಿಜಾಲ್ ಮತ್ತಿತರರಿದ್ದರು.
Mangalore Text on Narayana Guru, Periyar removed from class 10 Ramanath Rai slams BJP.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm