ಬ್ರೇಕಿಂಗ್ ನ್ಯೂಸ್
26-09-20 10:50 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಕೊರೊನಾ ಸೋಂಕು ನಿಯಂತ್ರಣಕ್ಕೆ ಹೊರಗೆ ಓಡಾಡುವ ಮಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂಬ ನಿಯಮ ಇದೆ. ಆದರೆ, ಈ ಕಾನೂನನ್ನು ಪಾಲನೆ ಮಾಡುವ ಮಂದಿ ಬೆರಳೆಣಿಕೆ ಜನ ಮಾತ್ರ. ಹೆಚ್ಚಿನ ಜನ ಮಾಸ್ಕ್ ಇಲ್ಲದೇ, ಧರಿಸಿದರೂ ಮೂಗು, ಬಾಯಿ ಬಿಟ್ಟುಕೊಂಡು ಓಡಾಡುತ್ತಾರೆ. ಮಾರುಕಟ್ಟೆ, ಜನಜಂಗುಳಿ ಇರುವಲ್ಲೂ ಇದೇ ಕತೆ. ಈ ಕಾರಣದಿಂದಾಗಿಯೇ ಮಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದು ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ಮೇರೆಗೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಪೊಲೀಸರ ಜೊತೆಗೆ ಫೀಲ್ಡಿಗೆ ಇಳಿದಿದ್ದಾರೆ. ರಸ್ತೆಯಲ್ಲಿ ಓಡಾಡುವ ಮಂದಿ ಮತ್ತು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಜನರನ್ನು ನಿಲ್ಲಿಸಿ ದಂಡ ಸಂಗ್ರಹ ಮಾಡಲು ಆರಂಭಿಸಿದ್ದಾರೆ. ಮಾಸ್ಕ್ ಧರಿಸದೇ ಇದ್ದವರಿಂದ ತಲಾ ನೂರು ರೂ.ನಂತೆ ದಂಡ ಕಕ್ಕಿಸುತ್ತಿದ್ದಾರೆ. ಶುಕ್ರವಾರದಿಂದ ಈ ಅಭಿಯಾನ ಆರಂಭಗೊಂಡಿದ್ದು ಮೊದಲ ದಿನ 5 ಸಾವಿರ ರೂ. ದಂಡ ಸಂಗ್ರಹ ಆಗಿತ್ತು. ಶನಿವಾರವೂ ಈ ಅಭಿಯಾನ ನಡೆಸಲಾಗಿದ್ದು ಕೆಲವೇ ಗಂಟೆಗಳಲ್ಲಿ ಆರು ಸಾವಿರ ದಂಡ ಸಂಗ್ರಹ ಆಗಿತ್ತು ಎನ್ನುತ್ತವೆ ಪಾಲಿಕೆಯ ಮೂಲಗಳು. ಅರ್ಧ ದಾರಿಯಲ್ಲಿ ನಿಲ್ಲಿಸಿದಾಗ, ಜನರು ಹಿಡಿಶಾಪ ಹಾಕುತ್ತಾ ದಂಡ ತೆತ್ತು ಮುಂದುವರಿಯುತ್ತಾರೆ..
ಈ ಮಾದರಿಯಲ್ಲಿ ಅಭಿಯಾನ ಇನ್ನು ಕೆಲವು ದಿನ ಇರಲಿದ್ದು ನಿರ್ಲಕ್ಷ್ಯ ತೋರುವ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡದಿದ್ದರೆ ಕೊರೊನಾ ನಾಗಾಲೋಟಕ್ಕೆ ಬ್ರೇಕ್ ಹಾಕಲಾಗದು ಎನ್ನುವ ಸಲಹೆಯನ್ನು ಜನರ ಮುಂದಿಟ್ಟಿದ್ದಾರೆ.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm