ಬ್ರೇಕಿಂಗ್ ನ್ಯೂಸ್
26-09-20 10:50 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಕೊರೊನಾ ಸೋಂಕು ನಿಯಂತ್ರಣಕ್ಕೆ ಹೊರಗೆ ಓಡಾಡುವ ಮಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂಬ ನಿಯಮ ಇದೆ. ಆದರೆ, ಈ ಕಾನೂನನ್ನು ಪಾಲನೆ ಮಾಡುವ ಮಂದಿ ಬೆರಳೆಣಿಕೆ ಜನ ಮಾತ್ರ. ಹೆಚ್ಚಿನ ಜನ ಮಾಸ್ಕ್ ಇಲ್ಲದೇ, ಧರಿಸಿದರೂ ಮೂಗು, ಬಾಯಿ ಬಿಟ್ಟುಕೊಂಡು ಓಡಾಡುತ್ತಾರೆ. ಮಾರುಕಟ್ಟೆ, ಜನಜಂಗುಳಿ ಇರುವಲ್ಲೂ ಇದೇ ಕತೆ. ಈ ಕಾರಣದಿಂದಾಗಿಯೇ ಮಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದು ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.



ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ಮೇರೆಗೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಪೊಲೀಸರ ಜೊತೆಗೆ ಫೀಲ್ಡಿಗೆ ಇಳಿದಿದ್ದಾರೆ. ರಸ್ತೆಯಲ್ಲಿ ಓಡಾಡುವ ಮಂದಿ ಮತ್ತು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಜನರನ್ನು ನಿಲ್ಲಿಸಿ ದಂಡ ಸಂಗ್ರಹ ಮಾಡಲು ಆರಂಭಿಸಿದ್ದಾರೆ. ಮಾಸ್ಕ್ ಧರಿಸದೇ ಇದ್ದವರಿಂದ ತಲಾ ನೂರು ರೂ.ನಂತೆ ದಂಡ ಕಕ್ಕಿಸುತ್ತಿದ್ದಾರೆ. ಶುಕ್ರವಾರದಿಂದ ಈ ಅಭಿಯಾನ ಆರಂಭಗೊಂಡಿದ್ದು ಮೊದಲ ದಿನ 5 ಸಾವಿರ ರೂ. ದಂಡ ಸಂಗ್ರಹ ಆಗಿತ್ತು. ಶನಿವಾರವೂ ಈ ಅಭಿಯಾನ ನಡೆಸಲಾಗಿದ್ದು ಕೆಲವೇ ಗಂಟೆಗಳಲ್ಲಿ ಆರು ಸಾವಿರ ದಂಡ ಸಂಗ್ರಹ ಆಗಿತ್ತು ಎನ್ನುತ್ತವೆ ಪಾಲಿಕೆಯ ಮೂಲಗಳು. ಅರ್ಧ ದಾರಿಯಲ್ಲಿ ನಿಲ್ಲಿಸಿದಾಗ, ಜನರು ಹಿಡಿಶಾಪ ಹಾಕುತ್ತಾ ದಂಡ ತೆತ್ತು ಮುಂದುವರಿಯುತ್ತಾರೆ..
ಈ ಮಾದರಿಯಲ್ಲಿ ಅಭಿಯಾನ ಇನ್ನು ಕೆಲವು ದಿನ ಇರಲಿದ್ದು ನಿರ್ಲಕ್ಷ್ಯ ತೋರುವ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡದಿದ್ದರೆ ಕೊರೊನಾ ನಾಗಾಲೋಟಕ್ಕೆ ಬ್ರೇಕ್ ಹಾಕಲಾಗದು ಎನ್ನುವ ಸಲಹೆಯನ್ನು ಜನರ ಮುಂದಿಟ್ಟಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm