ಬ್ರೇಕಿಂಗ್ ನ್ಯೂಸ್
26-09-20 10:50 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಕೊರೊನಾ ಸೋಂಕು ನಿಯಂತ್ರಣಕ್ಕೆ ಹೊರಗೆ ಓಡಾಡುವ ಮಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂಬ ನಿಯಮ ಇದೆ. ಆದರೆ, ಈ ಕಾನೂನನ್ನು ಪಾಲನೆ ಮಾಡುವ ಮಂದಿ ಬೆರಳೆಣಿಕೆ ಜನ ಮಾತ್ರ. ಹೆಚ್ಚಿನ ಜನ ಮಾಸ್ಕ್ ಇಲ್ಲದೇ, ಧರಿಸಿದರೂ ಮೂಗು, ಬಾಯಿ ಬಿಟ್ಟುಕೊಂಡು ಓಡಾಡುತ್ತಾರೆ. ಮಾರುಕಟ್ಟೆ, ಜನಜಂಗುಳಿ ಇರುವಲ್ಲೂ ಇದೇ ಕತೆ. ಈ ಕಾರಣದಿಂದಾಗಿಯೇ ಮಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದು ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.



ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ಮೇರೆಗೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಪೊಲೀಸರ ಜೊತೆಗೆ ಫೀಲ್ಡಿಗೆ ಇಳಿದಿದ್ದಾರೆ. ರಸ್ತೆಯಲ್ಲಿ ಓಡಾಡುವ ಮಂದಿ ಮತ್ತು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಜನರನ್ನು ನಿಲ್ಲಿಸಿ ದಂಡ ಸಂಗ್ರಹ ಮಾಡಲು ಆರಂಭಿಸಿದ್ದಾರೆ. ಮಾಸ್ಕ್ ಧರಿಸದೇ ಇದ್ದವರಿಂದ ತಲಾ ನೂರು ರೂ.ನಂತೆ ದಂಡ ಕಕ್ಕಿಸುತ್ತಿದ್ದಾರೆ. ಶುಕ್ರವಾರದಿಂದ ಈ ಅಭಿಯಾನ ಆರಂಭಗೊಂಡಿದ್ದು ಮೊದಲ ದಿನ 5 ಸಾವಿರ ರೂ. ದಂಡ ಸಂಗ್ರಹ ಆಗಿತ್ತು. ಶನಿವಾರವೂ ಈ ಅಭಿಯಾನ ನಡೆಸಲಾಗಿದ್ದು ಕೆಲವೇ ಗಂಟೆಗಳಲ್ಲಿ ಆರು ಸಾವಿರ ದಂಡ ಸಂಗ್ರಹ ಆಗಿತ್ತು ಎನ್ನುತ್ತವೆ ಪಾಲಿಕೆಯ ಮೂಲಗಳು. ಅರ್ಧ ದಾರಿಯಲ್ಲಿ ನಿಲ್ಲಿಸಿದಾಗ, ಜನರು ಹಿಡಿಶಾಪ ಹಾಕುತ್ತಾ ದಂಡ ತೆತ್ತು ಮುಂದುವರಿಯುತ್ತಾರೆ..
ಈ ಮಾದರಿಯಲ್ಲಿ ಅಭಿಯಾನ ಇನ್ನು ಕೆಲವು ದಿನ ಇರಲಿದ್ದು ನಿರ್ಲಕ್ಷ್ಯ ತೋರುವ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡದಿದ್ದರೆ ಕೊರೊನಾ ನಾಗಾಲೋಟಕ್ಕೆ ಬ್ರೇಕ್ ಹಾಕಲಾಗದು ಎನ್ನುವ ಸಲಹೆಯನ್ನು ಜನರ ಮುಂದಿಟ್ಟಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm