ಬ್ರೇಕಿಂಗ್ ನ್ಯೂಸ್
26-09-20 10:50 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಕೊರೊನಾ ಸೋಂಕು ನಿಯಂತ್ರಣಕ್ಕೆ ಹೊರಗೆ ಓಡಾಡುವ ಮಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂಬ ನಿಯಮ ಇದೆ. ಆದರೆ, ಈ ಕಾನೂನನ್ನು ಪಾಲನೆ ಮಾಡುವ ಮಂದಿ ಬೆರಳೆಣಿಕೆ ಜನ ಮಾತ್ರ. ಹೆಚ್ಚಿನ ಜನ ಮಾಸ್ಕ್ ಇಲ್ಲದೇ, ಧರಿಸಿದರೂ ಮೂಗು, ಬಾಯಿ ಬಿಟ್ಟುಕೊಂಡು ಓಡಾಡುತ್ತಾರೆ. ಮಾರುಕಟ್ಟೆ, ಜನಜಂಗುಳಿ ಇರುವಲ್ಲೂ ಇದೇ ಕತೆ. ಈ ಕಾರಣದಿಂದಾಗಿಯೇ ಮಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದು ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.



ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ಮೇರೆಗೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಪೊಲೀಸರ ಜೊತೆಗೆ ಫೀಲ್ಡಿಗೆ ಇಳಿದಿದ್ದಾರೆ. ರಸ್ತೆಯಲ್ಲಿ ಓಡಾಡುವ ಮಂದಿ ಮತ್ತು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಜನರನ್ನು ನಿಲ್ಲಿಸಿ ದಂಡ ಸಂಗ್ರಹ ಮಾಡಲು ಆರಂಭಿಸಿದ್ದಾರೆ. ಮಾಸ್ಕ್ ಧರಿಸದೇ ಇದ್ದವರಿಂದ ತಲಾ ನೂರು ರೂ.ನಂತೆ ದಂಡ ಕಕ್ಕಿಸುತ್ತಿದ್ದಾರೆ. ಶುಕ್ರವಾರದಿಂದ ಈ ಅಭಿಯಾನ ಆರಂಭಗೊಂಡಿದ್ದು ಮೊದಲ ದಿನ 5 ಸಾವಿರ ರೂ. ದಂಡ ಸಂಗ್ರಹ ಆಗಿತ್ತು. ಶನಿವಾರವೂ ಈ ಅಭಿಯಾನ ನಡೆಸಲಾಗಿದ್ದು ಕೆಲವೇ ಗಂಟೆಗಳಲ್ಲಿ ಆರು ಸಾವಿರ ದಂಡ ಸಂಗ್ರಹ ಆಗಿತ್ತು ಎನ್ನುತ್ತವೆ ಪಾಲಿಕೆಯ ಮೂಲಗಳು. ಅರ್ಧ ದಾರಿಯಲ್ಲಿ ನಿಲ್ಲಿಸಿದಾಗ, ಜನರು ಹಿಡಿಶಾಪ ಹಾಕುತ್ತಾ ದಂಡ ತೆತ್ತು ಮುಂದುವರಿಯುತ್ತಾರೆ..
ಈ ಮಾದರಿಯಲ್ಲಿ ಅಭಿಯಾನ ಇನ್ನು ಕೆಲವು ದಿನ ಇರಲಿದ್ದು ನಿರ್ಲಕ್ಷ್ಯ ತೋರುವ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡದಿದ್ದರೆ ಕೊರೊನಾ ನಾಗಾಲೋಟಕ್ಕೆ ಬ್ರೇಕ್ ಹಾಕಲಾಗದು ಎನ್ನುವ ಸಲಹೆಯನ್ನು ಜನರ ಮುಂದಿಟ್ಟಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm