ಬ್ರೇಕಿಂಗ್ ನ್ಯೂಸ್
09-03-21 09:52 pm Headline Karnataka News Network ಸ್ಪೆಷಲ್ ಕೆಫೆ
ನೀವು ಭೀಮನ ಶಕ್ತಿಯ ಕಥೆಯನ್ನು ಕೇಳಿದ್ದೀರಿ..ಶಕ್ತಿಯ ಕುರಿತು ಬಲ ಭೀಮನ ಎಂಬ ವಿಶೇಷಣವನ್ನೇ ಬಳಸುತ್ತೇವೆ. ದೈತ್ಯದೇಹಿಗಳನ್ನು ಭೀಮಕಾಯ ಎಂದು ಕರೆಯುತ್ತೇವೆ. ಹೌದಪ್ಪಾ ಹೌದು, ಭೀಮನ ಕಥೆ ನಮಗೂ ಗೊತ್ತು. ಆದರೆ ಈಗ ಭೀಮನಂತ ಇರುವವರು ಯಾರು ತಾನೇ ಸಿಗ್ತಾರೆ? ಎಂದು ಕೇಳಿದರೆ ಈ ವ್ಯಕ್ತಿಯೇ ಉತ್ತರ. ಉಕ್ರೇನ್ ಮೂಲದ ಡಿಮಿಟ್ರೋ ಖಲಾಝಿ ಎಂಬ ವ್ಯಕ್ತಿಯನ್ನೇ ಕಲಿಯುಗದ ಭೀಮ ಎನ್ನಬಹುದು. ಇವರ ಇನ್ಸ್ಟಾಗ್ರಾಂ ಖಾತೆಯನ್ನೊಮ್ಮೆ ನೀವು ನೋಡಬೇಕು..ಅಬ್ಬಾ! ಎಂದು ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವುದು ಖಚಿತ.
ಈ ವಿಡಿಯೋದಲ್ಲಿ ಉಕ್ರೇನಿನ ಈ ವ್ಯಕ್ತಿಯ ಭೀಮಬಲವನ್ನು ವೀಕ್ಷಿಸಬಹುದು. 150 ಕೆಜಿ ತೂಕವನ್ನು ಒಂದೇ ಕೈಯಲ್ಲಿ ಎತ್ತುವ ಸಾಮರ್ಥ್ಯ ಈತನಿಗಿದೆ. ಅಲ್ಲದೇ, ಎಮ್ಮೆ, ಕುದುರೆ, ಒಂಟೆಗಳನ್ನು ಸಲೀಸಾಗಿ ತನ್ನ ಹೆಗಲ ಮೇಲೆ ಹೊತ್ತೊಯ್ಯುತ್ತಾನೆ. ಅವರ ಸಾಹಸವನ್ನು ನೋಡಿ ಇತರರು ಬೆಕ್ಕಸಬೆರಗಾಗಿದ್ದಾರಂತೆ.

ಅವರಿಗೆ ಭೀಮ ಎಂದು ಅಭಿದಾನ ಕೊಟ್ರೆ ಯಾರೂ ಚಕಾರ ಎತ್ತುವುದಿಲ್ಲ. ಅಷ್ಟು ಶಕ್ತಿಶಾಲಿ ಉಕ್ರೇನ್ ಮೂಲದ ಡಿಮಿಟ್ರೋ ಖಲಾಝಿ. ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಇಂತಹ ವಿಡಿಯೋಗಳು ತುಂಬಿ ತುಳುಕುತ್ತಿವೆ. ಅಲ್ಲದೇ ಅವರಿಗೆ ಇನ್ಸ್ಟಾಗ್ರಾಂನಲ್ಲಿ 12 ಸಾವಿರಕ್ಕಿಂತಲೂ ಹೆಚ್ಚು ಫಾಲೊವರ್ಸ್ಗಳಿದ್ದಾರೆ.
ಇಷ್ಟೇ ಅಲ್ಲ. ಈ ಭೀಮನಿಗೆ ಸಾಹಿತ್ಯದಲ್ಲೂ ಆಸಕ್ತಿ ಇದೆಯಂತೆ. ಹಿಂದೆ ಸರ್ಕಸ್ನಲ್ಲಿ ಕೆಲಸ ಮಾಡಿದ್ದ ಅವರು ಅಥ್ಲೀಟ್ಗಳ ಬಗ್ಗೆ ಪುಸ್ತಕವನ್ನು ಬರೆದಿದ್ದಾರೆ. ಅಲ್ಲದೇ 2010ರಲ್ಲಿ ಗೋಲ್ಡನ್ ಪೆನ್ ಆಫ್ ರಷ್ಯಾ ಪ್ರಶಸ್ತಿಯೂ ಬಂದಿದೆ.
ಗಿನ್ನಿಸ್ ರೆಕಾರ್ಡನ್ನೂ ಮಾಡಿದ್ದಾರೆ..
ಒಂದಲ್ಲ ಎರಡಲ್ಲ..ಬರೋಬ್ಬರಿ 63 ಗಿನ್ನಿಸ್ ರೆಕಾರ್ಡ್ಗಳನ್ನು ಇವರು ಮಾಡಿದ್ದಾರೆ. ಈ ಮೂಲಕ ಸಾಧನೆಯ ಪರ್ವತ ಹತ್ತಿದ್ದಾರೆ. 2013ರಲ್ಲಿ ಒಮದು ಚಲನಚಿತ್ರದಲ್ಲಿಯೂ ಇವರು ಅಭಿನಯಿಸಿದ್ದರು.
Blessed with super strength, Dmytro effortlessly lifts a buffalo, and even a horse on the shoulder. He had also lifted camels and other heavy-weight animals on his shoulders.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm