ಬ್ರೇಕಿಂಗ್ ನ್ಯೂಸ್
16-06-22 08:26 pm HK News Desk ಕ್ರೀಡೆ
ಮುಂಬೈ, ಜೂ 16: ಗಾಯದ ಕಾರಣ ತವರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳಿಂದ ಹೊರಬಿದ್ದಿರುವ ಕನ್ನಡಿಗ ಕೆ. ಎಲ್. ರಾಹುಲ್ ಮುಂಬರುವ ಇಂಗ್ಲೆಂಡ್ ಪ್ರವಾಸದಿಂದಲೂ ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ.
ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡದ ನಾಯಕನಾಗಿ ನೇಮಕಗೊಂಡಿದ್ದರು. ಆದರೆ ಸರಣಿ ಆರಂಭಕ್ಕೆ ಒಂದೆರಡು ದಿನಗಳಿರುವಾಗ ಸ್ನಾಯುಸೆಳೆತಕ್ಕೆ ಒಳಗಾಗಿ ಸರಣಿಯಿಂದಲೇ ಹೊರಬಿದ್ದಿದ್ದರು. ಇದೀಗ ಗಾಯದಿಂದ ಬಳಲುತ್ತಿರುವ ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿರುವುದರಿಂದ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಹಾಗೂ ಸೀಮಿತ ಓವರ್ಗಳ ಸರಣಿಯಿಂದಲೂ ಹೊರ ಬಿದ್ದಿದ್ದಾರೆ.

ಭಾರತ ಕ್ರಿಕೆಟ್ ತಂಡದ ಉಪನಾಯಕ ಮುಂಬರುವ ಇಂಗ್ಲೆಂಡ್ ಪ್ರವಾಸದಿಂದ ಔಟ್ ಆಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಹಾಗೂ ಸೀಮಿತ ಓವರ್ಗಳ ಸರಣಿಯಲ್ಲಿ ಆಡಲು ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಗುರುವಾರ ಮುಂಬೈನಿಂದ ಲಂಡನ್ಗೆ ಪ್ರಯಾಣ ಬೆಳೆಸಿದೆ. ಈ ತಂಡದೊಂದಿಗೆ ರಾಹುಲ್ ತೆರಳಿಲ್ಲ. ಗಾಯದಿಂದ ಚೇತರಿಸಿಕೊಳ್ಳದ ರಾಹುಲ್ ಇಂಗ್ಲೆಂಡ್ ಪ್ರವಾಸದಿಂದ ಹೊರಗುಳಿಯಲಿದ್ದಾರೆ.
ಆರಂಭಿಕ ಬ್ಯಾಟರ್ರನ್ನು ಶನಿವಾರ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ನೆಸ್ ಟೆಸ್ಟ್ಗೆ ಒಳಗಾಗಲು ಸೂಚಿಸಲಾಗಿತ್ತು. ಆದರೆ ಅವರ ಗಾಯದ ಚೇತರಿಕೆಯಲ್ಲಿ ಯಾವುದೇ ಪ್ರಗತಿ ಕಾಣದಿರುವುದಕ್ಕೆ ಬಿಸಿಸಿಐ ಮುಂಬರು ವಿದೇಶಿ ಪ್ರವಾಸಗಳಿಂದ ಹೊರಗಿಟ್ಟಿತ್ತು. ಇದರ ಬದಲಾಗಿ ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಲು ನಿರ್ಧರಿಸಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದುಬಂದಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದು, "ರಾಹುಲ್ ಚಿಕಿತ್ಸೆಗಾಗಿ ಜರ್ಮನಿಗೆ ತೆರಳುತ್ತಿದ್ದಾರೆ, ಹಾಗಾಗಿ ಇಂಗ್ಲೆಂಡ್ ವಿರುದ್ಧದ ಮರುಹೊಂದಿಸಲಾಗಿರುವ ಎಡ್ಗಬಸ್ಟನ್ ಟೆಸ್ಟ್ ನಂತರ ನಡೆಯುವ ಸೀಮಿತ ಓವರ್ಗಳ ಸರಣಿಯಲ್ಲಿ ಆಡುವುದಿಲ್ಲ. ಮಂಡಳಿ ರಾಹುಲ್ ಫಿಟ್ನೆಸ್ ಬಗ್ಗೆ ಹೆಚ್ಚಿನ ನಿಗಾ ವಹಿಸುತ್ತಿದೆ" ಎಂದು ತಿಳಿಸಿದ್ದಾರೆ. ರಾಹುಲ್ ಈ ತಿಂಗಳ ಅಂತ್ಯದಲ್ಲಿ ಅಥವಾ ಜುಲೈ ಮೊದಲ ವಾರದಲ್ಲಿ ಜರ್ಮನಿಗೆ ತೆರಳುವ ಸಾಧ್ಯತೆಯಿದೆ.
ಇತ್ತೀಚೆಗೆ ಭಾರತ ತಂಡದಲ್ಲಿ ಮೂರು ಮಾದರಿಯಲ್ಲೂ ಖಾಯಂ ಆಟಗಾರನಾಗಿದ್ದ ಕೆ. ಎಲ್. ರಾಹುಲ್ ಪದೇ ಪದೇ ಗಾಯದ ಸಮಸ್ಯೆಗೆ ಒಳಗಾಗುತ್ತಲೇ ಇದ್ದಾರೆ. ಭವಿಷ್ಯದ ನಾಯಕನಾಗಿ ಗುರುತಿಸಿಕೊಂಡಿರುವ ರಾಹುಲ್ರಲ್ಲಿ ಇನ್ನೂ ಮುಂದಿನ ಏಳೆಂಟು ವರ್ಷಗಳ ಕಾಲ ಕ್ರಿಕೆಟ್ ಇರುವುದರಿಂದ ಫಿಟ್ನೆಸ್ ಕಡೆ ಹೆಚ್ಚಿನ ಗಮನ ನೀಡಬೇಕಿದೆ.
In what is terrible news for Indian cricket, senior player KL Rahul is seemingly set to be out for a while due to injury. The BCCI is also set to send him to Germany for treatment and Rahul will miss the tour of England too. The Karnataka man is down with a recurring groin injury.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm